Saturday, April 27, 2024
spot_imgspot_img
spot_imgspot_img

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ; ಹಿಂದೂ ಕಾರ್ಯಕರ್ತರ ಬಂಧನ

- Advertisement -G L Acharya panikkar
- Advertisement -

ಮಂಗಳೂರು; ಸುರತ್ಕಲ್‌ನಲ್ಲಿ ನಡೆದ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ನೇರ ಭಾಗಿಯಾದ ಆರು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ರೆ‌ಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಕಮಿಷನರ್ ಶಶಿಕುಮಾರ್, ಆರು ಮಂದಿಯನ್ನು ಬಂಧಿಸಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.

ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಒಟ್ಟು ಆರು ಮಂದಿ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಸುಹಾಸ್ ಶೆಟ್ಟಿ (29), ಮೋಹನ್ (26), ಗಿರಿಧರ್@ ಗಿರಿ, ಶ್ರೀನಿವಾಸ್ @ ಶೀನು, ದೀಕ್ಷಿತ್ (21), ಅಭಿಷೇಕ್ @ ಅಭಿ ಬಂಧಿತ ಆರೋಪಿಗಳು.

ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯವೆಸಗಿರುವುದಾಗಿ ತನ್ನೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!