- Advertisement -
- Advertisement -
ಮಂಗಳೂರು: ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಶರಣಾದ ಘಟನೆ ಕಾಸರಗೋಡಿನ ಕುಂಬಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶ್ರೇಯ (22) ಎಂದು ಗುರುತಿಸಲಾಗಿದೆ.
6 ತಿಂಗಳ ಹಿಂದಷ್ಟೇ ಕಿದೂರು ಮೈರಾಳದ ಉದಯಕುಮಾರ್ ಅವರಿಗೆ ಶ್ರೇಯಾ ಅವರನ್ನು ಮದುವೆ ಮಾಡಿಕೊಡಲಾಗಿತ್ತು. ವಿವಾಹದ ಬಳಿಕ ಇವರ ಸಂಸಾರ ಚೆನ್ನಾಗಿಯೇ ಇತ್ತು ಎನ್ನಲಾಗಿದೆ. ಶ್ರೇಯಾ ಅವರು ಇಂದು ಬೆಳಿಗ್ಗೆ ಸ್ನಾನಕ್ಕೆಂದು ಹೇಳಿ ಬಾತ್ ರೂಮ್ ಗೆ ತೆರಳಿದ್ದರು. ಈ ವೇಳೆ ಅವರು ಹೊರಬಾರದಿರುವುದನ್ನು ಗಮನಿಸಿದ ಮನೆಯವರು ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶ್ರೇಯಾ ಪತ್ತೆಯಾಗಿದ್ದಾರೆ. ಈ ಘಟನೆಯ ಬಗ್ಗೆ ಕುಂಬಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -