Friday, April 19, 2024
spot_imgspot_img
spot_imgspot_img

ಮಂಗಳೂರು: ವಾಹನ ಅಡ್ಡಗಟ್ಟಿ ಹಣವಸೂಲಿ ಮಾಡುತ್ತಿದ್ದ 6 ಆರೋಪಿಗಳನ್ನು ಬಂಧಿಸಿದ ಪೊಲೀಸರು!

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಹನ ಸವಾರರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತೆ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲೆಯ ಮೂಡಬಿದಿರೆ, ಮೂಲ್ಕಿ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ದರೋಡೆ ಮಾತ್ರವಲ್ಲದೆ, ವಾಹನ ಸವಾರರನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣದಲ್ಲಿ ಝಬೈರ್, ಇಬ್ರಾಹಿಂ, ಲತೀಪ್, ರಾಕೇಶ್ ಸೇರಿದಂತೆ ಒಟ್ಟು 6 ಜನರನ್ನ ಬಂಧನ ಮಾಡಲಾಗಿದೆ.

ಬಂಧಿತರಿಂದ ಕಾರು, ಏರ್ ಗನ್, ಚಿನ್ನಾಭರಣ ಸಹಿತ 41.82 ಲಕ್ಷ ರೂ. ಮೌಲ್ಯದ ಸೊತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡ, ಬೆಂಗಳೂರು, ಹಾಸನ, ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಈ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ತಂಡದಲ್ಲಿ ಒಟ್ಟು 60ಕ್ಕೂ ಜನರು ಸೇರಿ ಇಂತಹ ಕೃತ್ಯವನ್ನು ಮಾಡುತ್ತಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ayo
- Advertisement -

Related news

error: Content is protected !!