Saturday, June 28, 2025
spot_imgspot_img
spot_imgspot_img

ಮಂಗಳೂರು: ಮೀನುಗಾರಿಕೆಗೆ ತೆರಳಿದ ಬೋಟ್‌ನಲ್ಲಿ ಕಾಣಿಸಿಕೊಂಡ ಬೆಂಕಿ; 10 ಮೀನುಗಾರರ ರಕ್ಷಣೆ..!

- Advertisement -
- Advertisement -

ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ.

ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್‌ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ನೀಡಿದ ಬೋಟ್ ಮಾಲಕರು, ಭಾನುವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜೊತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!