- Advertisement -
- Advertisement -


ಮಂಗಳೂರು: ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಪರಿಣಾಮ ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆ ಮಂಗಳೂರಿನ ಬಲ್ಮಠದ ಸಹೋದಯ ಚರ್ಚ್ ಬಳಿಯ ಕ್ರೀಡಾಂಗಣದ ಬಳಿನಡೆದಿದೆ.
ಹೊಸ ವರ್ಷದ ಹಿನ್ನಲೆಯಲ್ಲಿ ಕೆಲವೊಂದು ಜನರು ಇಲ್ಲಿ ತಮ್ಮ ವಾಹನ ನಿಲ್ಲಿಸಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ರಾತ್ರಿ ಸುಮಾರು 11.30 ರ ವೇಳೆಗೆ ಮರ ಏಕಾಏಕಿ ಉರುಳಿ ಬಿದ್ದಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಹಲವು ವಾಹನಗಳು ಜಖಂ ಗೊಂಡಿವೆ. ಈ ವೇಳೆ ಅಲ್ಲೇ ಇದ್ದ ಕುಟುಂಬವೊಂದು ಪ್ರಾಣಾಪಾಯದಿಂದ ಪಾರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮರ ಉರುಳಿದ ಕಾರಣ ವಿದ್ಯುತ್ ತಂತಿಗಳು ತುಂಡಾಗಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಇದರಿಂದ ಈ ಪ್ರದೇಶದ ಜನರು ಹೊಸ ವರ್ಷವನ್ನು ಕತ್ತಲೆಯಲ್ಲೇ ಆಚರಿಸಿಕೊಳ್ಳುವಂತಾಗಿದೆ. ಇಂದು ಮುಂಜಾನೆ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರ ತೆರವು ಮಾಡಿದ ದುರಸ್ತಿ ಕಾರ್ಯ ನಡೆಸಿದ್ದಾರೆ.
- Advertisement -