- Advertisement -
- Advertisement -
ಬಸ್ ಚಾಲಕ ಸೇರಿದಂತೆ ನಾಲ್ವರಿಗೆ ಗಾಯ.
ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಜ್ಯೋತಿ ಅಂಬೇಡ್ಕರ್ ವೃತ್ಯದ ಬಳಿ ನಡೆದಿದೆ.
ಮಂಗಳೂರು ಬಂದರ್ ಕಡಯಿಂದ ಬರುತ್ತಿದ್ದ ಲಾರಿ ಬಂಟ್ಸ್ ಹಾಸ್ಟೆಲ್ ನಿಂದ ಸ್ಟೇಟ್ ಬ್ಯಾಂಕ್ ಕಡೆ ಹೋಗುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬಸ್ ನ ಮುಂಭಾಗ ನಜ್ಜು ಗುಜ್ಜಾಗಿದೆ.
ಘಟನೆಯಲ್ಲಿ ಸ್ಥಳೀಯ ದಾರಿ ದೀಪಕಂಬ ಹಾಗೂ ಸಿಸಿಟಿವಿ ಕಂಬಳಿಗೆ ಹಾನಿ ಉಂಟಾಗಿದೆ ಎಂದು ತಿಳಿದು ಬಂದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -