Sunday, June 29, 2025
spot_imgspot_img
spot_imgspot_img

ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಮಂಗಳೂರು: ನಗರದಲ್ಲಿ ಖಾಸಗಿ ಬಸ್‌ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರು ನಗರದ ಬಜಾಲ್‌ ನಿವಾಸಿ ಪ್ರಜ್ವಲ್‌ ಡಿ. (35) ಎಂದು ಗುರುತಿಸಲಾಗಹಿದೆ.

ಇವರು ಭವಾನಿ ಬಸ್‌ನ ಮಾಲಕರಾಗಿದ್ದ ದೇವೇಂದ್ರ ಅವರ ಎರಡನೇ ಪುತ್ರ. ಜೆ.ಎಂ. ರೋಡ್‌ನ‌ಲ್ಲಿರುವ ಸ್ವಗೃಹದಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸಹೋದರ ಬಸ್‌ನ ಮಾಲಕರಾಗಿದ್ದರು. ಪ್ರಜ್ವಲ್‌ ಅದೇ ವ್ಯವಹಾರ ನೋಡಿಕೊಳ್ಳುತ್ತಿದ್ದರು.

ಲೋನ್ ಆ್ಯಪ್ ವ್ಯವಹಾರ ಹೊಂದಿದ್ದ ಪ್ರಜ್ವಲ್ ಸಕಾಲದಲ್ಲಿ ಸಾಲ ಮರು ಪಾವತಿ ಮಾಡಲು ಸಾಧ್ಯವಾಗದೆ ಮಾನಸಿಕ ಕಿರುಕುಳಕ್ಕೊಳಗಾಗಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮನೆಮಂದಿ ಶಂಕಿಸಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!