Saturday, May 4, 2024
spot_imgspot_img
spot_imgspot_img

ಮಂಗಳೂರು: ಯುವಕನಿಗೆ ಚೂರಿ ಇರಿದು ಹತ್ಯೆ..!

- Advertisement -G L Acharya panikkar
- Advertisement -

ಮಂಗಳೂರು: ನಗರ ಹೊರವಲಯದ ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.

ಸಾರಸ್ವತ ಕಾಲನಿ ನಿವಾಸಿ ವರುಣ್ (28) ಹತ್ಯೆಗೊಳಗಾದ ಯುವಕ. ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಐದು ಮಂದಿಯ ನಡುವೆ ವಾಗ್ವಾದ ನಡೆದು ಸೂರಜ್, ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿದು ಹತ್ಯೆ ನಡೆಸಿದ್ದಾನೆ. ಹಳೇ ವೈಷಮ್ಯದಿಂದ ಕೃತ್ಯ ನಡೆದಿರುವ ಸಾಧ್ಯತೆಗಳಿದ್ದು, ಸೋಮೇಶ್ವರ ಪುರಸಭೆಗೆ ಡಿಸೆಂಬರ್ 27ಕ್ಕೆ ಚುನಾವಣೆಯೂ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೆಲವೇ ದಿನಗಳು ಬಾಕಿಯಿದೆ.

ಈ ಸಂಬಂಧವೂ ಗಲಾಟೆ ನಡೆದಿರುವ ಸಾಧ್ಯತೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಚೂರಿ ಇರಿದ ಸ್ಥಳೀಯ ನಿವಾಸಿ ಸೂರಜ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರವಿರಾಜ್ ಎಂಬವರಿಗೂ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!