Saturday, June 28, 2025
spot_imgspot_img
spot_imgspot_img

ಮಂಗಳೂರು: ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾದ ನಿಶ್ಚಿತಾರ್ಥವಾಗಿದ್ದ ಯುವತಿ; ಅಕ್ಬರ್ ಆಲಿ ಖಾತೆಗೆ ಹಣ ವರ್ಗಾವಣೆ..!

- Advertisement -
- Advertisement -

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಚಿನ್ನಾಭರಣ ಹಾಗೂ ಹಣವನ್ನು ಹೊತ್ತುಕೊಂಡು ಪರಾರಿಯಾದ ಪ್ರಕರಣ ಬರ್ಕೆ ಠಾಣೆಯಲ್ಲಿ ದಾಖಲಾಗಿದೆ. ಪರಾರಿಯಾದ ಯುವತಿಯನ್ನು ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್ಮೆಂಟ್‌ವೊ0ದರಲ್ಲಿ ವಾಚ್‌ಮನ್ ಆಗಿರುವ ಯಶೋಧಾ ಅವರ ಪುತ್ರಿ ರೇಶ್ಮಾ (21) ಎನ್ನಲಾಗಿದೆ.

ಮೂಲತಃ ಗದಗದ ನಿವಾಸಿಗಳಾಗಿದ್ದು, ಯುವತಿಯ ನಿಶ್ಚಿತಾರ್ಥ ಆ. 21ರಂದು ನಡೆದಿತ್ತು. ನಿಶ್ಚಿತಾರ್ಥ ಸಂದರ್ಭ ಹುಡುಗನ ಮನೆಯವರು ಅಂದಾಜು 1ಲಕ್ಷ.ರೂ. ಮೌಲ್ಯದ ಚಿನ್ನದ ಸರ, 50,000 ರೂ. ಮೌಲ್ಯದ ಚಿನ್ನದ ಉಂಗುರ, ಕಿವಿಯೋಲೆ, ಬೆಳ್ಳಿ ಕಾಲುಗೆಜ್ಜೆ ಹಾಕಿದ್ದರು. ರೇಶ್ಮಾ ಆ. 26ರಂದು ಈ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾಳೆ ಎಂದು ಪ್ರಕರಣದಲ್ಲಿ ತಿಳಿಸಲಾಗಿದೆ. ಅಲ್ಲದೆ ಮನೆಯವರು ಬ್ಯಾಂಕ್‌ನಲ್ಲಿ ಜಮೆ ಮಾಡಿಟ್ಟಿದ್ದ 90,000 ರೂ. ಹಣವನ್ನು ಅಕ್ಬರ್ ಆಲಿ ಎನ್ನುವ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ ಎನ್ನಲಾಗಿದೆ.

- Advertisement -

Related news

error: Content is protected !!