Saturday, June 28, 2025
spot_imgspot_img
spot_imgspot_img

ಮಂಗಳೂರು: ಆಕಸ್ಮಿಕವಾಗಿ ಕಾರಿಗೆ ಬೆಂಕಿ; ಅಪಾಯದಿಂದ ಪಾರು..!

- Advertisement -
- Advertisement -

ಕಿನ್ನಿಗೋಳಿ: ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಮಕ್ಕಳು ಹಾಗೂ ತಾಯಿಯನ್ನು ಕಾರಿನಲ್ಲಿ ಕೂರಿಸಿ AC ಹಾಕಿ ಬೇಕರಿಗೆ ಹೋದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹತ್ತಿಕೊಂಡಿದೆ. ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ನಿವಾಸಿ ಜಾಸ್ಮಿನ್ ಅವರು ಮತ್ತೋರ್ವ ಮಹಿಳೆ‌ ಮತ್ತು ಎರಡು‌ ಮಕ್ಕಳೊಂದಿಗೆ ಕಿನ್ನಿಗೋಳಿ‌ ಮಾರುಕಟ್ಟೆ ಮುಂಭಾಗ ಕಾರು ನಿಲ್ಲಿಸಿ ಹೋದ ಸಂದರ್ಭ ಕಾರಿನಲ್ಲಿ ಹೊಗೆ ಬರಲಾರಂಭಿಸಿದೆ.

ಕಾರಿನಲ್ಲಿದ್ದ ಮಹಿಳೆ ಮತ್ತು ಎರಡು ಮಕ್ಕಳು ಬೊಬ್ಬೆ ಹಾಕಿದ್ದು ಕೂಡಲೇ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ಅಪಾಯದಿಂದ ಪಾರು‌ಮಾಡಿದ್ದಾರೆ. ಸ್ಥಳೀಯ ಅಂಗಡಿ‌ ಮಾಲೀಕ ರಾಘವೇಂದ್ರ ಪ್ರಭು ಸ್ಥಳೀಯ ಪೆಟ್ರೋಲ್ ಪಂಪ್‌ನಿಂದ ಅಗ್ನಿ ಶಮನದ ಸಾಧನದ ಮೂಲಕ, ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸಿದ್ದಾರೆ. ಕಾರು ಸಂಪೂರ್ಣ ಸುಟ್ಟು ಹೋಗಿದ್ದರಿಂದ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

- Advertisement -

Related news

error: Content is protected !!