- Advertisement -
- Advertisement -
ಮಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ.
ಇಂದು ಮುಂಜಾನೆ 4.30ಕ್ಕೆ ಈ ಘಟನೆ ನಡೆದಿದ್ದು, ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿದೆ. ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಬೆಂಕಿ ಹರಡುವ ಮುನ್ಸೂಚನೆ ದೊರೆತ ಹಿನ್ನಲೆಯಲ್ಲಿ ಸ್ಥಳೀಯರು ಬೆಂಕಿ ತಗುಲಿದ ಬೋಟನ್ನು ಬಂದರಿನಿಂದ ನದಿ ಕಡೆಗೆ ಕೊಂಡೊಯ್ದಿದ್ದಾರೆ.
ಇದರಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅರುಣ್ ಎಂಬವರು ಈ ಬೋಟ್ ಅನ್ನು ನಡೆಸುತ್ತಿದ್ದು, ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
- Advertisement -