Saturday, April 27, 2024
spot_imgspot_img
spot_imgspot_img

ಮಂಗಳೂರಿನಲ್ಲಿ ಮತ್ತೆ ತಲ್ವಾರ್ ಅಟ್ಟಹಾಸ- ಮಹಮ್ಮದ್ ತಾಜುದ್ದೀನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ !

- Advertisement -G L Acharya panikkar
- Advertisement -

ಮಂಗಳೂರು: ಕಳೆದ ಕೆಲ ವಾರದಿಂದ ಶಾಂತ ವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಾರಕಾಸ್ತ್ರಗಳನ್ನೂ ಜಲಪಿಸಿದ ಘಟನೆ ವರದಿಯಾಗಿದೆ ಯುವಕನೋರ್ವನ ಮೇಲೆ ತಂಡವೊಂದು ಮಂಗಳೂರಿನ ಹೊರವಲಯ ಅಡ್ಡೂರಿನಲ್ಲಿ ತಲವಾರಿನಿಂದ ದಾಳಿ ನಡೆಸಿದೆ.

ಕೃತ್ಯವೂ ಮಂಗಳವಾರ ರಾತ್ರಿ ಸಂಭವಿಸಿದೆ. ತಲವಾರು ದಾಳಿಗೆ ಒಳಗಾದ ಯುವಕನನ್ನು ಅಡ್ಡೂರು ನಿವಾಸಿ ಮಹಮ್ಮದ್ ತಾಜುದ್ದೀನ್ (30) ಎಂದು ಗುರುತಿಸಲಾಗಿದೆ. ಮೂವರ ದುಷ್ಕರ್ಮಿಗಳ ತಂಡ ಈತನ ಮೇಲೆ ಮಚ್ಚು ಬೀಸಿದ್ದು ಯುವಕನ ತೊಡೆ ಭಾಗ, ಕೈ ಸಹಿತ ವಿವಿದೆಡೆ ಗಾಯಗಳಾಗಿವೆ.

ಯುವಕ ಅಡ್ಡೂರಿನಿಂದ ಮನೆ ಕಡೆ ತೆರಳುವ ವೇಳೆ ಯತ್ನ ನಡೆದಿದ್ದು ಈ ದಾಳಿಯು ಫರ್ವೀಝ್ ಹಾಗೂ ತಂಡದಿಂದ ನಡೆದಿದೆ ಎಂದು ಶಂಕಿಸಲಾಗಿದೆ. ದಾಳಿಯಿಂದ ಗಾಯಗೊಂಡಿರುವ ಯುವಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೇ ವೈಷ್ಯಮ್ಯದಿಂದ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!