- Advertisement -
- Advertisement -
ಮಂಗಳೂರು(ನ.9) : ಅದಾನಿ ಸಂಸ್ಥೆಗೆ ಮಂಗಳೂರು ವಿಮಾನ ನಿಲ್ದಾಣವನ್ನು ಕೇಂದ್ರ ಸರಕಾರ ಕೊಟ್ಟ ನಂತರ ಇದೀಗ ಕರಾವಳಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಇಂದು ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯ ವತಿಯಿಂದ ಬಜ್ಪೆಯ ಕೆಂಜಾರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆಯಲ್ಲಿ ಕೇಂದ್ರ ಸರಕಾರದ ಖಾಸಗಿ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.
ಇತ್ತೀಚಿಗೆ ವಿಮಾನ ನಿಲ್ದಾಣದ ಹೆಸರನ್ನು ಅದಾನಿ ಹೆಸರನ್ನು ಸೇರಿಸಿ ಪ್ರದರ್ಶಿಸಲಾಗಿತ್ತು. ಇದನ್ನು ಜನ ಖಂಡಿಸಿದ್ದರು.
- Advertisement -