- Advertisement -
- Advertisement -
ಮಂಗಳೂರು: ಉಜಿರೆಯಲ್ಲಿ ಬಾಲಕನ ಅಪರಹಣ ಪ್ರಕರಣ ಮರೆಯುವ ಮುನ್ನವೇ ಮೂವರು ಬಾಲಕರ ಅಪಹರಣಕ್ಕೆ ವಿಫಲ ಯತ್ನ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರು ನಗರದ ಪದವಿನಂಗಡಿ ಬಳಿ ಕೊಂಚಾಡಿ ಮಹಾಲಸಾ ದೇವಸ್ಥಾನದ ಎದುರು ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಬಾಲಕನನ್ನು ಅಪಹರಿಸಲು ಯತ್ನಿಸಿದ ಘಟನೆ ವರದಿಯಾಗಿದೆ.ರಾತ್ರಿಯ ವೇಳೆಯಲ್ಲಿ ಮೂವರು ಬಾಲಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬಾಲಕರಿಗೆ ಮುಸುಕು ಹಾಕಿ ಅಪಹರಣಕ್ಕೆ ಯತ್ನಿಸಿದ್ದಾರೆ.
ಈ ವೇಳೆಯಲ್ಲಿ ಜನರು ಬರುತ್ತಿರುವುದನ್ನು ಗಮನಿಸಿದ ಅಪಹರಣಕಾರರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಬಾಲಕರನ್ನು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಘಟನೆ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
- Advertisement -