- Advertisement -
- Advertisement -
ಮಂಗಳೂರು: ಮಂಗಳೂರಿನ ಫಳ್ನೀರ್ನಲ್ಲಿರುವ ಅಥೆನಾ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ್ ಕೊರೊನಾ ರೋಗಿಯ ಚಿಕಿತ್ಸೆಗೆ ಸಂಬಂಧಿಸಿ ಕುಟುಂಬಸ್ಥರು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ.


ಮಂಗಳೂರಿನ ಫಳ್ನೀರ್ನಲ್ಲಿರುವ ಅಥೆನಾ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ್ ಮೇಲೆ ಕೊರೊನಾ ರೋಗಿಯ ಚಿಕಿತ್ಸೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಹಲ್ಲೆ ನಡೆಸಿದ್ದು, ಈ ಕುರಿತು ವೈದ್ಯರ ಮೇಲೆ ಹಲ್ಲೆ ಹಾಗೂ ಕೊರೊನಾ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ನಗರದ ಮಾರ್ನಮಿಕಟ್ಟೆಯ ಶಂಶೀರ್ ಆಲಿ (43), ಚೊಕ್ಕಬೆಟ್ಟುವಿನ ಸರ್ಫರಾಜ್ (43) ಬಂಧಿತರಾಗಿದ್ದಾರೆ. ಈ ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



- Advertisement -








