Sunday, June 29, 2025
spot_imgspot_img
spot_imgspot_img

ಗಾಂಜಾ ಮತ್ತಿನಲ್ಲಿ ಮನೆಗೆ ನುಗ್ಗಿದ ಯುವಕರ ತಂಡ- ಮನೆಯವರ ಮೇಲೆ ದಾಳಿ

- Advertisement -
- Advertisement -

ಮಂಗಳೂರು: ಗಾಂಜಾ ಮತ್ತಿನಲ್ಲಿ ಮನೆಗೆ ನುಗ್ಗಿದ ಯುವಕರ ತಂಡ ಮನೆಮಂದಿಗೆ ತಲವಾರು ತೋರಿಸಿ, ಬೆದರಿಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದಿದೆ.

ಪಚ್ಚನಾಡಿಯಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಫ್ರಾನ್ಸಿಸ್ ಎಂಬವರ ಮನೆಗೆ ನುಗ್ಗಿ ತಂಡವೊಂದು ದಾಂಧಲೆ ನಡೆಸಿದೆ. ನಿತಿನ್ ಮತ್ತು ಮಹೇಶ್ ಎಂಬವರ ತಂಡ ತಲವಾರು ಹಿಡಿದು ದಾಂಧಲೆ ನಡೆಸಿರುವ ಘಟನೆ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ನಿತಿನ್ ಎಂಬಾತ ಸ್ಥಳೀಯ ರೌಡಿಶೀಟರ್ ಆಗಿದ್ದು ಗಾಂಜಾ ಮತ್ತಿನಲ್ಲಿ ಪರಿಸರದಲ್ಲಿ ರೌಡಿಸಂ ನಡೆಸುತ್ತಿದ್ದಾನೆ. ನಿನ್ನೆ ರಾತ್ರಿ ಫ್ರಾನ್ಸಿಸ್ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಆತನ ತಾಯಿಗೆ ತೀವ್ರ ಹಲ್ಲೆ ನಡೆಸಿದ್ದಾರೆ. ತಲವಾರು ಕಾಳಗದಲ್ಲಿ ಕಾರ್ತಿಕ್ ಎಂಬಾತನ ಕಾಲಿಗೆ ಕಡಿದಿದ್ದಾರೆ. ವಿಡಿಯೋದಲ್ಲಿ ತಲವಾರು ಹಿಡಿದು ತಳ್ಳಾಡುತ್ತಿರುವ ವಿಡಿಯೋ ಸೆರೆಯಾಗಿದೆ.

ಪಚ್ಚನಾಡಿಯಲ್ಲಿ ಗಾಂಜಾ ವ್ಯಸನಿಗಳ ಗುಂಪು ಪ್ರತಿ ದಿನವೂ ರಾತ್ರಿ ವೇಳೆ ಸ್ಥಳೀಯರನ್ನು ತಲವಾರು ತೋರಿಸಿ ಬೆದರಿಸುತ್ತಿದೆ. ಪೊಲೀಸರ ನಿರ್ಲಕ್ಷ್ಯದಿಂದಲೇ ಈ ಭಾಗದಲ್ಲಿ ಗಾಂಜಾ ವ್ಯಸನಿಗಳು ಹೆಚ್ಚುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -

Related news

error: Content is protected !!