Sunday, June 29, 2025
spot_imgspot_img
spot_imgspot_img

ಮಂಗಳೂರು: ಅಧ್ಯಾಪಕಿಯ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಎಗರಿಸಿದ ಬಿಸಿಎ ಪದವೀಧರ ಅರೆಸ್ಟ್!

- Advertisement -
- Advertisement -

ಮಂಗಳೂರು: ಶಾಲೆಗೆ ತೆರಳುತ್ತಿದ್ದ ವೇಳೆ ಶಿಕ್ಷಕಿಯೋರ್ವರ ಕತ್ತಿನಲ್ಲಿದ್ದ ಸರವನ್ನು ಕಳವು ಮಾಡಿದ ಆರೋಪದಲ್ಲಿ ಬಿಸಿಎ ಪದವೀಧರನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಚಿಕ್ಕಮಗಳೂರಿನ ಶ್ರೇಯಸ್ ಎನ್ನಲಾಗಿದೆ. ಈತ ಸುರತ್ಕಲ್ ಕಾಲೇಜಿನ 2019ನೇ ಸಾಲಿನ ಬಿಸಿಎ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ. ಕೆಲಸ ಸಿಗದೆ ನಿರುದ್ಯೋಗಿಯಾಗಿದ್ದ ಶ್ರೇಯಸ್‌ ಈ ಕೃತ್ಯವೆಸಗಿದ್ದಾನೆ ಎನ್ನಲಾಗುತ್ತಿದೆ.

ಶಿಕ್ಷಕಿ ವಿದ್ಯಾ ಅವರು ಆಗಸ್ಟ್ 4 ರಂದು ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಗೆ ತೆರಳುತ್ತಿದ್ದ ವೇಳೆಯಲ್ಲಿ ಕತ್ತಿನಲ್ಲಿದ್ದ 2 ಪವನ್ ತೂಕದ ಮಾಂಗಲ್ಯ ಸರವನ್ನು ಕಳವು ಮಾಡಲಾಗಿತ್ತು.

ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ ವೇಳೆಯಲ್ಲಿ ಶ್ರೇಯಸ್‌ ಚಹರೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!