- Advertisement -
- Advertisement -
ಮಂಗಳೂರು: ತೋಕೊಟ್ಟು ಒಳಪೇಟೆಯ ಅಕ್ರಮ ಬೀಫ್ ಸ್ಟಾಲ್ ಗೆ ಬರುತ್ತಿದ್ದ ಅಕ್ರಮ ಗೋ ಮಾಂಸವನ್ನು ಬಜರಂಗದಳ ಕಾರ್ಯಕರ್ತರು ತಡೆದಿದ್ದಾರೆ.
ಬಜರಂಗದಳ ಕೆಲವು ದಿನಗಳಿಂದ ಪೊಲೀಸ್ ಇಲಾಖೆ, ಉಳ್ಳಾಲ ಪುರಸಭೆ ಗೆ ಅಕ್ರಮ ಬೀಫ್ ಸ್ಟಾಲ್ ನ್ನು ಮುಚ್ಚಿಸುವಂತೆ ಮನವಿ ಮಾಡಲಾಗಿತ್ತು,ಆದರೆ ಇಲಾಖೆಯಿಂದ ಯಾವುದೇ ರೀತಿಯ ಸ್ಪಂದನೆ ದೊರಕದೆ ಇದ್ದಾಗ ಇದೀಗ ಬಜರಂಗದಳವೆ ನೇರ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸವನ್ನು ತಡೆ ಹಿಡಿದು ಪೊಲೀಸರಿಗೆ ಒಪ್ಪಿಸಿದೆ.
ಕರ್ನಾಟಕದಲ್ಲಿ ಗೋ ಹತ್ಯಾ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮ ಗೋ ಮಾಂಸದ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಮೌನ ವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -