- Advertisement -
- Advertisement -
ಮಂಗಳೂರು: ಕೆಎಸ್ಆರ್ಟಿಸಿ ಬಸ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ಸಮೀಪದ ಅರ್ಕುಳ ದ್ವಾರದ ಬಳಿ ನಡೆದಿದೆ.
ಮೃತಪಟ್ಟ ಸ್ಥಳೀಯ ನಿವಾಸಿ ಚರಣ್ ರಾಜ್ (34) ಎಂದು ಗುರುತಿಸಲಾಗಿದೆ.
ಇವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಬಸ್ ಢಿಕ್ಕಿಯಾಗಿದೆ.ಅವೈಜ್ಞಾನಿಕ ಕಾಮಗಾರಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ ಇದಕ್ಕೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -