- Advertisement -
- Advertisement -
ಮಂಗಳೂರು : ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ಮೃತಪಟ್ಟ ಘಟನೆ ಮಂಗಳೂರು ನಗರದ ಕಾವೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಶೇಖರಪ್ಪ ಎಂದು ಗುರುತಿಸಲಾಗಿದೆ.
ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್ ವಿಭಾಗಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖರಪ್ಪ ನವರು ತಮ್ಮ ಕ್ವಾಟರ್ಸ್ ಕಂಪೌಂಡ್ ಗೆ ಹೋಗಲು ಡಿವೈಡರ್ ಕಡೆಯಿಂದ ಬೈಕ್ ತಿರುಗಿಸಿದಾಗ ಬೋಂದೆಲ್ನಿಂದ ಕಾವೂರು ಕಡೆಗೆ ಬರುತ್ತಿದ್ದ ಕಾರೋಂದು ವೇಗವಾಗಿ ಬಂದು ಇವರ ಬೈಕಿಗೆ ಢಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಶೇಖರಪ್ಪರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -