Sunday, June 29, 2025
spot_imgspot_img
spot_imgspot_img

ಮಂಗಳೂರು: ಮಸಾಜ್‌ ಸೆಂಟರ್‌ ಮೇಲೆ ದಾಳಿ ಪ್ರಕರಣ; ಪ್ರಸಾದ್ ಅತ್ತಾವರ ಸಹಿತ 11 ಮಂದಿಗೆ ಜಾಮೀನು

- Advertisement -
- Advertisement -

ಮಂಗಳೂರು: ನಗರದ ಮಸಾಜ್‌ ಸೆಂಟರ್‌ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ ಸಹಿತ 11 ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಈ ಪ್ರಕರಣದಲ್ಲಿ 14 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಆ ಪೈಕಿ ಮೂವರು ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಅರ್ಜಿ ಸಲ್ಲಿಸಿದ 11 ಮಂದಿಗೆ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ನೀಡಿದ್ದಾರೆ.

ಜ.23 ರಂದು ನಗರದ ಬಿಜೈನಲ್ಲಿರುವ ಕಲರ್ಸ್‌ ಯುನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಆರೋಪಿಗಳು ದಾಂಧಲೆ ನಡೆಸಿದ್ದರು. ಬಳಿಕ ಆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ತಕ್ಷಣ ಎಚ್ಚೆತ್ತುಕೊಂಡ ಬರ್ಕೆ ಪೊಲೀಸರು ಪ್ರಸಾದ್ ಅತ್ತಾವರ ಸಹಿತ 14 ಮಂದಿಯನ್ನು ಬಂಧಿಸಿದ್ದರು. ಆರೋಪಿಗಳಿಗೆ ಮಂಗಳೂರಿನ 6ನೆ ಜೆಎಂಎಫ್‌ಸಿ ನ್ಯಾಯಾಲಯ ಫೆ.7ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

- Advertisement -

Related news

error: Content is protected !!