- Advertisement -
- Advertisement -
ಮಂಗಳೂರು : ಗುರುವಾರ ಜನರಿಂದ ತುಂಬಿ ತುಳುಕುತ್ತಿದ್ದ ನಗರದ ಸೆಂಟ್ರಲ್ ಮಾರ್ಕೆಟ್ ಇಂದು ಸಂಪೂರ್ಣ ಬಂದ್ ಆಗಿದೆ.
ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಮಾರ್ಕೆಟ್ ಅನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ನಿನ್ನೆ ಬೆಳಗ್ಗೆ 10 ಗಂಟೆಯವರೆಗೂ ಮಾರ್ಕೆಟ್ ನಲ್ಲಿ ಸಾಕಷ್ಟು ಜನರಿದ್ದು , ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ವ್ಯಾಪಾರ ನಡೆಸುತ್ತಿದ್ದರು. ಇದೇ ಹಿನ್ನೆಲೆಯಲ್ಲಿ ಮಾರ್ಕೆಟ್ ಸುತ್ತ ಪೊಲೀಸರು ಗೇಟ್ ಹಾಕಿ ಬಂದ್ ಮಾಡಿದ್ದಾರೆ. ಬೈಕಂಪಾಡಿ ಎಪಿಎಂಸಿಯಲ್ಲೇ ವ್ಯಾಪಾರ ಮಾಡುವಂತೆ ಆದೇಶ ನೀಡಿದ್ದಾರೆ.
- Advertisement -