ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟ್ ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿರುವ ಅರ್ಜಿಯನ್ನು ಮಂಗಳೂರು ಮಹಾನಗರ ಪಾಲಿಕೆ ಹಿಂಪಡೆದಿದ್ದು, ವರ್ತಕರು ಮತ್ತೆ ಸೆಂಟ್ರಲ್ ಮಾರ್ಕೆಟ್ನಲ್ಲಿ ವ್ಯಾಪಾರ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಕೊರೊನಾ ಸೋಂಕಿನಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿ ನೂತನ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಿ ಏಪ್ರಿಲ್ 7ರಿಂದ ನಗರದ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸಲು ಜಿಲ್ಲಾಡಳಿತ ಆದೇಶಿಸಿತ್ತು. ವ್ಯಾಪಾರಿಗಳಿಗೆ ವ್ಯಾಪಾರ ವಹಿವಾಟು ನಡೆಸಲು ಎಪಿಎಂಸಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು.
ಈ ನಡುವೆ ಮಾರ್ಕೆಟ್ ಕಟ್ಟಡ ಕೆಡವಿ ಹೊಸ ಕಟ್ಟಡ ಕಟ್ಟುವ ಉದ್ದೇಶದಿಂದ ಚಿಲ್ಲರೆ ವ್ಯಾಪಾರಸ್ಥರಿಗೆ ಪುರಭವನ ಬಳಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು. ಆದರೆ, ವರ್ತಕರು ಸೆಂಟ್ರಲ್ ಮಾರ್ಕೆಟ್ ಬಿಟ್ಟು ತೆರಳಲು ಸಿದ್ಧರಿರಲಿಲ್ಲ. ಪ್ರಕರಣ ನ್ಯಾಯಾಲಯಕ್ಕೆ ಕೊಂಡೊಯ್ದರು.ಇದೀಗ ಮಂಗಳೂರು ಮಹಾನಗರ ಪಾಲಿಕೆಯೇ ತಮ್ಮ ಆದೇಶ ಹಿಂತೆಗೆದಿದ್ದು, ಪರಿಣಾಮ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಮತ್ತೆ ವ್ಯಾಪಾರ ವಹಿವಾಟು ಆರಂಭಿಸಿದ್ದಾರೆ.