- Advertisement -
- Advertisement -
ಮಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ನಡೆಸಿದ ಪರೀಕ್ಷೆಗಳಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನ ಅಸ್ಮತ್ ಶರ್ಮೀನ್ ಟಿ.ಎಸ್. ರವರು ಸಿವಿಲ್ ಎಂಜಿನಿಯರಿಂಗ್ನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
9.42ರ ಸಿಜಿಪಿಎ ಗಳಿಸಿರುವ ಅಸ್ಮತ್ ಒಟ್ಟು 13 ಚಿನ್ನದ ಪದಕಗಳ ಗೌರವಕ್ಕೆ ಪಾತ್ರರಾಗಿದ್ದಾರೆ.
ಏಪ್ರಿಲ್ 3ರಂದು ಬೆಳಗಾವಿಯ ವಿಟಿಯುನಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಅವರು ಕುಲಾಧಿಪತಿ ,ರಾಜ್ಯಪಾಲ ವಜುಭಾಯಿ ವಾಲಾ ರವರಿಂದ ಪದವಿ ಮತ್ತು ಪದಕಗಳನ್ನು ಸ್ವೀಕರಿಸಲಿದ್ದಾರೆ.
- Advertisement -