- Advertisement -
- Advertisement -
ಮಂಗಳೂರಿನಲ್ಲಿ ಕಳೆದ ವರ್ಷ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಮೊಬೈಲ್ ಸಿಮ್ ಪೂರೈಕೆ ಮಾಡಿದ್ದ ವ್ಯಕ್ತಿಯನ್ನು ಒಡಿಶಾದ ವಿಶೇಷ ಕಾರ್ಯಪಡೆ ಬಂಧಿಸಿದೆ.
ಜಾಜ್ ಪುರ ಜಿಲ್ಲೆಯ ಜಾಜ್ಪುರ ಜಿಲ್ಲೆಯ ಪ್ರೀತಂಕಾರ್ (31) ಬಂಧಿತ ಆರೋಪಿ. ಈತನ ವಿಚಾರಣೆಯ ವೇಳೆ ಇವನಿಗೂ ಕುಕ್ಕರ್ ಬ್ಲಾಸ್ಟ್ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಗೂ ಸಂಪರ್ಕವಿರುವುದು ಬೆಳಕಿಗೆ ಬಂದಿದೆ. 2022ರ ನವೆಂಬರ್ ನಲ್ಲಿ ಮಂಗಳೂರಿನಲ್ಲಿ ಆಟೋವೊಂದರಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು.
ಪಾಕಿಸ್ತಾನದ ಗುಪ್ತಚಾರ ಸಂಸ್ಥೆ ಜತೆ ಸಂಪರ್ಕ ಹೊಂದಿದ ವ್ಯಕ್ತಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದ ವಿಶೇಷ ಕಾರ್ಯಪಡೆ ತಂಡಕ್ಕೆ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿ ಸಿಕ್ಕಿ ಬಿದ್ದಿದ್ದಾರೆ. ಇವರಿಬ್ಬರ ನಡುವೆ ಲಿಂಕ್ ಇರುವ ಮಾಹಿತಿಯನ್ನು ಕರ್ನಾಟಕ ಪೊಲೀಸ್ ಹಾಗೂ ರಾಷ್ಟ್ರೀಯ ತನಿಖಾ ದಳಕ್ಕೆ ಒಡಿಶಾ ಪೊಲೀಸರು ಮಾಹಿತಿ ನೀಡಿದ್ದಾರೆ.
- Advertisement -