Saturday, June 28, 2025
spot_imgspot_img
spot_imgspot_img

ಮಂಗಳೂರು: ಡೆತ್ ನೋಟ್ ಬರೆದು ಆತ್ಯಹತ್ಯೆಗೆ ಶರಣಾದ ತಬಲ ಕಲಾವಿದ ಸುರೇಶ್ ದಂಪತಿ!

- Advertisement -
- Advertisement -

ಮಂಗಳೂರು: ದಂಪತಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕದ್ರಿ ಪಿಂಟೋಸ್ ಲೇನ್ ನಲ್ಲಿ ಇಂದು ಮುಂಜಾನೆ ನಡೆದಿದೆ.

ತಬಲ ಕಲಾವಿದ ಸುರೇಶ್ (62) ಹಾಗೂ ಅವರ ಪತ್ನಿ ವಾಣಿ (55) ಮೃತರು. ಸುರೇಶ್ ಅವರು ಖ್ಯಾತ ತಬಲ ಕಲಾವಿದರಾಗಿದ್ದು, ಅವರ ಪತ್ನಿ ವಾಣಿ ಖಾಸಗಿ ಕಾಲೇಜುವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸು ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.

ಬುಧವಾರ ಮುಂಜಾನೆ ಸುರೇಶ್ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ವಾಣಿ ನೇಣಿಗೆ ಶರಣಾಗಿದ್ದಾರೆ. ಮೃತರು ಓರ್ವ ಮಗನನ್ನು ಅಗಲಿದ್ದಾರೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಟ್ ಫಂಡ್ ನಲ್ಲಿ ಆದ ನಷ್ಟದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸ್ ಮೂಲಗಳಿಂದ ಬಂದ ಮಾಹಿತಿಯಾಗಿದೆ‌. ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ‌.

- Advertisement -

Related news

error: Content is protected !!