Thursday, April 18, 2024
spot_imgspot_img
spot_imgspot_img

ಮಂಗಳೂರು: ಕೋವಿಡ್ ಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆಯಾಗಿಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ!

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆಯಾಗಿಲ್ಲ, ಸದ್ಯಕ್ಕೆ ಈಗಿನ ಮಾರ್ಗಸೂಚಿಯೇ ಜಾರಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವೊಂದು ಸುಳ್ಳು ವದಂತಿಯಂತೆ, ದ.ಕ.ಜಿಲ್ಲೆಯಾದ್ಯಂತ ಕೆಲವು ನಿರ್ಬಂಧಗಳೊಂದಿಗೆ ಹೊಸ ಮಾರ್ಗಸೂಚಿ ಜಾರಿಯಾಗುತ್ತದೆ. ಮದುವೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ, ವಾರದಲ್ಲಿ ಎರಡು ದಿನ ಮಾತ್ರ ಸಾಮಾಗ್ರಿ ಖರೀದಿಗೆ ಅವಕಾಶ ನೀಡಲಾಗುತ್ತದೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವರದಿಯ ಬಗ್ಗೆ ಜಿಲ್ಲಾಧಿಕಾರಿಯವರಲ್ಲಿ ಮಾಹಿತಿ ಕೇಳಿದಾಗ ‘ಅದು ತಪ್ಪು ಮಾಹಿತಿ’ ಎಂದು ಡಾ.‌ಕೆ.ವಿ.ರಾಜೇಂದ್ರರವರು ಸ್ಪಷ್ಟನೆ ನೀಡಿದ್ದಾರೆಂದು ತಿಳಿದುಬಂದಿದೆ.

- Advertisement -

Related news

error: Content is protected !!