- Advertisement -
- Advertisement -
ಮಂಗಳೂರು: ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಜೂನ್ 11 ರ ಶುಕ್ರವಾರ ಕೆಪಿಟಿ ಪೆಟ್ರೋಲ್ ಪಂಪ್ನಲ್ಲಿ “100 ನಾಟ್ ಔಟ್” ಎಂಬ ಟ್ಯಾಗ್ ಲೈನ್ನೊಂದಿಗೆ ಪ್ರತಿಭಟನೆ ನಡೆಸಿತು.
ಪ್ರತಿಭಟನಾ ಸ್ಥಳದಲ್ಲಿ ಪೆಟ್ರೋಲ್ ದರ 100 ಗಡಿ ದಾಟಿದ್ದಕ್ಕಾಗಿ ಕಾಂಗ್ರೆಸ್ ಕೇಕ್ ಕತ್ತರಿಸಿ ಪ್ರತಿಭಟನೆ ನಡೆಸಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಾಮನಾಥ್ ರೈ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ , ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಉಪಸ್ಥಿತರಿದ್ದರು.
- Advertisement -