ಲಾಕ್ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಲವಾರು ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡ ದೀಕ್ಷಿತ್ ಮತ್ತು ತಂಡ





ಕರ್ನಾಟಕ ಪ್ರದೇಶ ಯುವ ಕಾಂಗ್ರೇಸ್ ಸಮಿತಿಯ ದ ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಭ್ಯರ್ಥಿಯಾಗಿ ದೀಕ್ಷಿತ್ ಅತ್ತಾವರ ಸ್ಪರ್ಧಿಸುತ್ತಿದ್ದು, ಜಿಲ್ಲೆಯಲ್ಲಿ ಹಲವಾರು ಆರ್ಥಿಕ, ಸಾಮಾಜಿಕವಾಗಿ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡವರು.
NSUI ವಿದ್ಯಾರ್ಥಿ ಸಂಘಟನೆಯ ಮೂಲಕ ವಿದ್ಯಾರ್ಥಿ ರಾಜಕೀಯಕ್ಕೆ ಪ್ರವೇಶಿಸಿದ ಇವರು 2013-NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಚುನಾಯಿತ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. 2017-INTUC ನ ಮಂಗಳೂರು ದಕ್ಷಿಣ ಬ್ಲಾಕ್ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಸಲ್ಲಿಸಿದ ಇವರು, 2021 ರಿಂದ ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಸಲ್ಲಿಸುತ್ತಿದ್ದರು.
ಸಂಘಟನಾ ಚತುರನಾಗಿ ಗುರುತಿಸಿಕೊಂಡ ಇವರು ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಜಿಲ್ಲೆಯ ನಿರಾಶ್ರಿತರಿಗೆ ದೀಕ್ಷಿತ್ ಅತ್ತಾವರ ಮತ್ತು ಇವರ ತಂಡ ಮಂಗಳೂರಿನ ವಿವಿಧೆಡೆ ಅಸಹಾಯಕ ಜನರಿಗೆ ಉಚಿತ ಊಟ ವಿತರಣೆ ಮಾಡಿದ್ದರು. ಮಂಗಳೂರಿನ ಸ್ಟೇಟ್ ಬ್ಯಾಂಕ್ ಸಮೀಪದಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ದೀಕ್ಷಿತ್ ಅತ್ತಾವರ ಇವರ ತಂಡದ ವಾಹನ ಕಂಡ ಕೂಡಲೇ ನೂರಾರು ಜನರು ಓಡೋಡಿ ಬರುತ್ತಿದ್ದರು. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಸರದಿ ಸಾಲಿನಲ್ಲಿ ಬಂದು ಊಟ ಮಾಡಿ ಹೋಗುತ್ತಿದ್ದ ಅಸಹಾಯಕ ಜನರ ಪಾಲಿಗೆ ಲಾಕ್ಡೌನ್ ಸಂದರ್ಭದಲ್ಲಿ ದೀಕ್ಷಿತ್ ಅತ್ತಾವರ ತಂಡ ಬೆಳಕಾಗಿದ್ದರು. ಅದಲ್ಲದೆ ಲಾಕ್ಡೌನ್ ಸಂದರ್ಭದಲ್ಲಿ ವಿವಿಧ ಆಸ್ಟತ್ರೆಗಳಿಗೆ, ಹೆಚ್ಐವಿ ಸೋಂಕಿತರ ಕೇಂದ್ರಕ್ಕೆ ಭೇಟಿ ನೀಡಿ ಆಹಾರವನ್ನು ಪೂರೈಸುತ್ತಿದ್ದರು. ಕೊರೋನಾ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆಯೇ ಅಲ್ಲಿ ಇವರು ಪ್ರಾಣಿಗಳೂ ಅಹಾರವಿಲ್ಲದೆ ಚಟಪಡಿಸುತ್ತಿದ್ದವು. ಈ ಸಂದರ್ಭದಲ್ಲಿ ದೀಕ್ಷಿತ್ ಅತ್ತಾವರ ಇವರ ತಂಡ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿನ ಮಂಗಗಳಿಗೆ ಹಲಸಿನ ಹಣ್ಣು ನೀಡಿ ಈ ಮೂಲಕ ಮಾನವೀಯತೆ ಮೆರೆದಿದ್ದರು. ಈ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
ಈ ರೀತಿಯಾಗಿ ದ ಕ ಜಿಲ್ಲಾ ಕಾಂಗ್ರೇಸ್ನ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ಆರ್ಥಿಕ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಎಲ್ಲರ ಪ್ರಶಂಸೆಗೆ ಪಾತ್ರರಾಗಿರುವ ದೀಕ್ಷಿತ್ ಅತ್ತಾವರ ಇದೀಗ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.