Thursday, April 25, 2024
spot_imgspot_img
spot_imgspot_img

ಮಂಗಳೂರು: ಯುವ ವೈದ್ಯೆ ಕೋವಿಡ್‌ ಗೆ ಬಲಿ!

- Advertisement -G L Acharya panikkar
- Advertisement -

ಉಳ್ಳಾಲ: ಕೋವಿಡ್‌ ದೃಢ ಪಟ್ಟಿದ್ದ ಯುವ ವೈದ್ಯೆಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಲಶ್ಶೇರಿಯ ಮಹಾ ಬಶೀರ್ (23) ಮೃತರು. ಎಂಟು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಅವರು ಗರ್ಭಿಣಿಯಾಗಿದ್ದರು.

ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರು, ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ತಿಂಗಳ ಹಿಂದೆ ರಜೆಯಲ್ಲಿ ತೆರಳಿದ್ದರು.

ಊರಿನಲ್ಲಿದ್ದ ವೇಳೆ ಕೋವಿಡ್‌ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಅವರ ಪತಿ ದೇರಳಕಟ್ಟೆಯ ಖಾಸಗಿ ಕಾಲೇಜಿನಲ್ಲಿ ಎಂಡಿಎಸ್ ವಿದ್ಯಾರ್ಥಿಯಾಗಿದ್ದಾರೆ.

ಪಂಪ್‌ವೆಲ್ ಬಳಿಯಿರುವ ಖಾಸಗಿ ಆಸ್ಪತ್ರೆಯಲ್ಲಿ ಈ ಯುವ ವೈದ್ಯೆಯ ತಂದೆ ಪಾಲುದಾರರಾಗಿದ್ದು, ಅದೇ ಆಸ್ಪತ್ರೆಯಲ್ಲಿ ಮಗಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!