Thursday, April 25, 2024
spot_imgspot_img
spot_imgspot_img

ಮಂಗಳೂರು: ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನ; ಶಾಸಕ ಡಾ. ಭರತ್ ಶೆಟ್ಟಿಯವರು ಟ್ರಾಕ್ಟರ್ ಚಲಾಯಿಸಿ ಉದ್ಘಾಟನೆ

- Advertisement -G L Acharya panikkar
- Advertisement -

ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರದ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನದ ಅಂಗವಾಗಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬಡಗ ಉಳೇಪಾಡಿ ತಮ್ಮಯ್ಯ ಪೂಜಾರಿಯವರ ಜಮೀನಿನಲ್ಲಿ ಟ್ರಾಕ್ಟರ್ ಚಲಾಯಿಸುವ ಮೂಲಕ ಬುಧವಾರ ಚಾಲನೆ ನೀಡಿದರು.

ರಾಜ್ಯ ಸರಕಾರದ ಈ ಯೋಜನೆ ಕೃಷಿ ಇಲಾಖೆಯ ಮೂಲಕ ಅನುಷ್ಟಾನಗೊಳಿಸಲಾಗುತ್ತಿದ್ದು, ಈಗಾಗಲೇ ಶಾಸಕರು ಈ ಕುರಿತು ವಿವಿಧ ಪಂಚಾಯತ್ ಗಳಲ್ಲಿ ಸರಣೆ ಸಭೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಮತ್ತು ಯೋಜನೆಯ ಪ್ರಯೋಜನವನ್ನು ಕೃಷಿಕರು ಪಡೆಯಲು ಮಾಹಿತಿ ನೀಡುವ ಕಾರ್ಯ ಮಾಡುತ್ತಾ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಸಂದೀಪ್ ಪಚ್ಚನಾಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಶ್ವನಾಥ ಶೆಟ್ಟಿ, ಸ್ಥಳೀಯ ಪಂಚಾಯತ್ ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಹನ್ ಅತಿಕಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಗುರುಪುರ, ಪಂಚಾಯತ್ ಉಪಾಧ್ಯಕ್ಷರುಗಳು, ಪಂ.ಸದಸ್ಯರುಗಳು, ಮಂಡಲ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಮಟ್ಟದ ಪ್ರಮುಖರು, ಕಾರ್ಯಕರ್ತರು ಹಾಗೂ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ರೈ, CHSC ಕೇಂದ್ರದ ಪ್ರಮುಖರು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!