- Advertisement -
- Advertisement -
ಮಂಗಳೂರು: ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಜಪ್ತಿಮಾಡಿದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೇ ರಾಮ್ಕಿ ಎನರ್ಜಿ ಮತ್ತು ಎನ್ವಿರೋನ್ ಮೆಂಟ್ ಲಿಮಿಟೆಡ್ ಲಿ. ಅವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಯ ಐದು ಪ್ರಕರಣಗಳಲ್ಲಿ ಸುಮಾರು 25,11,080 ರೂ ಮೌಲ್ಯದ 221 ಕೆ.ಜಿ 910 ಗ್ರಾಂ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ವಿಲೇವಾರಿ ಸಮಿತಿಯ ಅಧ್ಯಕ್ಷ ಸೋನಾವಣೆ ಋಷಿಕೇಶ್ ಭಗವಾನ್ ,ಐಪಿಯಸ್ ಮತ್ತು ಸದಸ್ಯರುಗಳಾದ ಶ್ರೀ ವೆಲೆಂಟೈನ್ ಡಿಸೋಜಾ, ಪೊಲೀಸ್ ಉಪಾಧೀಕ್ಷಕರು, ಬಂಟ್ವಾಳ ಉಪವಿಭಾಗ ಮತ್ತು ಡಾ. ಗಾನ ಪಿ ಕುಮಾರ್ ಉಪಸ್ಥಿತರಿದ್ದರು.
- Advertisement -