ಮಂಗಳೂರು: ಈ ಹಿಂದೆ ಹಲವು ಮಂದಿ ಬಂಧಿತರಾಗಿದ್ದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಮತ್ತಿಬ್ಬರು ನೈಜೀರಿಯಾ ಮೂಲದ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಡಿಸಿಪಿ ಹರಿರಾಂ ಶಂಕರ್, ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಇಬ್ಬರು ನೈಜೀರಿಯಾ ಹಾಗೂ ಓರ್ವ ಕಾಸರಗೋಡು ಮೂಲದ ಆರೋಪಿಯನ್ನು ಬಂಧಿಸಿ ತನಿಖೆಗೊಳಪಡಿಸಿದಾಗ, ಮತ್ತೆ ಈ ಜಾಲದಲ್ಲಿ ಭಾಗಿಯಾಗಿದ್ದ, ನೈಜೀರಿಯಾ ಮೂಲದ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನಲ್ಲಿ 3.5 ಲಕ್ಷ ರೂ. ಬೆಲೆಯ 55 ಗ್ರಾಂ ಎಂಡಿಎಂಯನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದಲ್ಲಿ ಬಳಕೆಯಾಗಿದ್ದ ಕಾರು ಮತ್ತು ಎಂಡಿಎಂ ಮಾರಾಟದಿಂದ ಪಡೆಯಲಾಗಿದ್ದ 70 ಸಾವಿರ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಪ್ರಕರಣದಲ್ಲಿ ಐದು ಮಂದಿ ನೈಜೀರಿಯಾ ಮೂಲದ ಪ್ರಜೆಗಳು ಸೇರಿದಂತೆ 11ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎಸಿಪಿ ಪಿಎ ಹೆಗಡೆ ಉಪಸ್ಥಿತರಿದ್ದರು.