Friday, April 19, 2024
spot_imgspot_img
spot_imgspot_img

ಮಂಗಳೂರು: ಡೆತ್‌ ನೋಟ್‌‌ ಬರೆದಿಟ್ಟಿದ್ದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್‌ ವಿದ್ಯಾರ್ಥಿ

- Advertisement -G L Acharya panikkar
- Advertisement -
vtv vitla
vtv vitla
suvarna gold

ಮಂಗಳೂರು: ಸುರತ್ಕಲ್‌‌‌ನ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.26ರ ಭಾನುವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಿಹಾರದ ಪಾಟ್ನಾ ಮೂಲದ ಸೌರವ್‌‌ (19) ಎಂದು ಗುರುತಿಸಲಾಗಿದೆ. ಈತ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌‌ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆಯ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದ ಎನ್ನಲಾಗಿದೆ. ನನ್ನ ಮೆದುಳಿನಲ್ಲಿ ಕೆಮಿಕಲ್‌‌‌ ರಿಯಾಕ್ಷನ್‌‌‌‌‌ ಆಗುತ್ತಿದೆ. ಸಾಲ ಮಾಡಿ ಶಿಕ್ಷಣ ಮಾಡುತ್ತಿದ್ದೇನೆ ಎಂದು ತಂದೆಗೆ ತಿಳಿಸುವಂತೆ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗ್ಗೆ 8 ಗಂಟೆ ಸುಮಾರಿಗೆ ಆತ ರೂಂನ ಬಾಗಿಲು ತೆರೆಯದ ಹಿನ್ನೆಲೆ 9.30ರ ರ ವೇಳೆಗೆ ಕಿಟಿಕಿಯಿಂದ ನೋಡಿದಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ತಕ್ಷಣವೇ ಆತನ ಪೋಷಕರಿಗೆ ಮಾಹಿತಿ ನೀಡಿಲಾಗಿದೆ. ಆದರೆ, ಪೋಷಕರು, ನಾವು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದು, ಬರಲು ಕಷ್ಟವಾಗುತ್ತದೆ. ಅಂತ್ಯಕ್ರಿಯೆಯನ್ನು ಅಲ್ಲಿಯೇ ಮಾಡಿ ಎಂದು ಹೇಳಿದ್ದಾರೆ.

10ನೇ ತರಗತಿಯಲ್ಲಿರುವಾಗಲೂ ಸೌರವ್‌ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿರುವುದಾಗಿ ಎನ್‌ ಶಶಿಕುಮಾರ್‌‌ ಹೇಳಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಹಾಯದಿಂದ ಪೋಷಕರನ್ನು ಕರೆಸಿ ಮೃತದೇಹವನ್ನು ಪಾಟ್ನಾಗೆ ತೆಗೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಘಟನೆಯ ಬಗ್ಗೆ ಸುರತ್ಕಲ್‌‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!