ಮಂಗಳೂರು : ಸಿಎಎ ವಿರೋಧಿ ಪ್ರತಿಭಟನೆ ವೇಳೆ ”ಮಂಗಳೂರು ಗೋಲಿಬಾರ್” ಪ್ರಕರಣಕ್ಕೆ ಶನಿವಾರ ಒಂದು ವರ್ಷವಾಗಿದ್ದು , ಪ್ರತಿಭಟನೆಯ ವೇಳೆ ಗೋಲಿಬಾರ್ ನಡೆದು ಇಬ್ಬರು ಮೃತಪಟ್ಟ ಪ್ರಕರಣ ನಡೆದು ಇಂದಿಗೆ ಒಂದು ವರ್ಷ ತುಂಬಿದೆ.ಈ ಹಿನ್ನೆಲೆ ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಕಳೆದ ವರ್ಷ ದೇಶದಾದ್ಯಂತ ಸಿಎಎ ವಿರುದ್ದ ಪ್ರತಿಭಟನೆ ನಡೆಯುತ್ತಲ್ಲೇ ಇದ್ದ ಸಂದರ್ಭದಲ್ಲಿ 2019 ರ ಡಿಸೆಂಬರ್ 19 ರಂದು ಮಂಗಳೂರಿನಲ್ಲಿ ಯುವಕರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಸಂಘರ್ಷ ಉಂಟಾಗಿದ್ದು ಇಬ್ಬರು ಪೊಲೀಸ್ ಗುಂಡಿಗೆ ಬಲಿಯಾದರೆ, ಎಂಟು ಮಂದಿ ಗಾಯಗೊಂಡಿದ್ದರು.
ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಗಲಭೆ ನಡೆದ ಸ್ಟೇಟ್ ಬ್ಯಾಂಕ್ ಮತ್ತು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭದ್ರತೆ ಮಾಡಲಾಗಿದೆ. ಕೆಎಸ್ಆರ್ಪಿ ತುಕಡಿ ಸೇರಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇನ್ನು ಈ ಗೋಲಿಬಾರ್ ಪ್ರಕರಣದ ಬಗ್ಗೆ ಸದ್ಯ ಮ್ಯಾಜಿಸ್ಟ್ರೇಟ್ ತನಿಖೆ ಮತ್ತು ಸಿಐಡಿಯಿಂದ ತನಿಖೆ ನಡೆಯುತ್ತಿದೆ.