- Advertisement -
- Advertisement -
ಮಂಗಳೂರು: ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ ನೆಡಲಾಗಿದ್ದು, ಅದನ್ನು ತೆರವುಗೊಳಿಸಿದ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಪುಚ್ಚೆಮುಗೇರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೂಡಬಿದಿರೆ ಪೊಲೀಸರು ಧ್ವಜವನ್ನು ತೆರವು ಮಾಡಿದ್ದಾರೆ.
ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಎಂಬುವವರು ಪಂಚಾಯತ್ ಅನುಮತಿ ಪಡೆಯದೆ ಹಾಕಿರುವ ಧ್ವಜ ಇದಾಗಿದ್ದು, ಈ ಬಗ್ಗೆ ಪೊಲೀಸರ ಗಮನಕ್ಕೆ ತರದಿರುವುದಕ್ಕೆ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಪಿಡಿಒ ಕರ್ತವ್ಯದ ಬಗ್ಗೆ ಎಚ್ಚರಿಕೆ ನೀಡಿದ್ದು, ನಿಮ್ಮ ಮೇಲೆ ಕೇಸ್ ಹಾಕೋದಾಗಿ ಎಚ್ಚರಿಸಿದ್ದಾರೆ. ಇನ್ನು ಗ್ರಾಮದಲ್ಲಿ ಅಹಿತಕರ ಘಟನೆಗೆ ಈ ಧ್ವಜ ಕಾರಣವಾಗುತ್ತಿತ್ತು. ಪೊಲೀಸರ ಸಕಾಲಿಕ ಕ್ರಮದಿಂದ ಪ್ರಕರಣ ತಿಳಿಯಾಗಿದೆ. ಇನ್ನು ಧ್ವಜ ನೆಟ್ಟವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
- Advertisement -