- Advertisement -
- Advertisement -
ಮಂಗಳೂರು: ಪ್ರಪ್ರಥಮವಾಗಿ ಅಂತರ್ಜಾಲ ತುಳು ವಿಚಾರಗೋಷ್ಠಿಯು ‘ತುಳುನಾಡ್ಡ ಕಟ್ಟು ಕಟ್ಟಲೆ’ ಎಂಬ ವಿಷಯದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಿಶ್ವದ ಎಲ್ಲಾ ತುಳು ಕೂಟ-ಸಂಘಟನೆಯ ಒಟ್ಟು ಕೂಡುವಿಕೆಯಲ್ಲಿ ಈ ವಿಚಾರಗೋಷ್ಠಿ ನಡೆಯಲಿದೆ.
ಈ ಕಾರ್ಯಕ್ರಮವು ಜುಲೈ 10ರಂದು ಸಂಜೆ 7 ಗಂಟೆಗೆ ನಡೆಯಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರು ಉದ್ಘಾಟಿಸಲಿದ್ದಾರೆ. ಎಲ್ಲಾ ತುಳುಕೂಟ ಸಂಘಟನೆಯ ಪ್ರಮುಖರಿಂದ ಅಭಿಪ್ರಾಯ ಮಂಡನೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಾಹಿತಿ ಮತ್ತು ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಉಪನ್ಯಾಸ ನೀಡಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ.ಕತ್ತಲ್ಸಾರ್ ವಹಿಸಲಿದ್ದಾರೆ.
- Advertisement -