Friday, April 19, 2024
spot_imgspot_img
spot_imgspot_img

ಮಂಗಳೂರು: ರಾಮ-ಲಕ್ಷ್ಮಣ ಜೋಡುಕೆರೆ ಕಂಬಳ: ಶಾಸಕ ಭರತ್ ಶೆಟ್ಟಿ ಕೋಣಗಳು ಪ್ರಥಮ

- Advertisement -G L Acharya panikkar
- Advertisement -

ಮಂಗಳೂರು: ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳವು ಬಂಗ್ರಕುಳೂರಿನಲ್ಲಿ ಸಂಪನ್ನಗೊಂಡಿದೆ. ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ಕೋಣಗಳು ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಗೆದ್ದುಕೊಂಡವು.

ಕೂಟದಲ್ಲಿ ಒಟ್ಟು 142 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ ಮೂರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಎಂಟು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 27 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 21 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 66 ಜೊತೆ ಕೋಣಗಳು ಭಾಗಿಯಾಗಿದ್ದವು.

ಈ ಹಿಂದೆ ಹಲವಾರು ಬಾರಿ ಪ್ರಶಸ್ತಿ ಗೆದ್ದುಕೊಂಡಿದ್ದ ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿಯವರ ಕೋಣಗಳನ್ನು ಮಂಗಳೂರು ಕಂಬಳದಲ್ಲಿ ಶಾಸಕ ಭರತ್ ಶೆಟ್ಟಿಯವರ ಹೆಸರಿನಲ್ಲಿ ಓಡಿಸಲಾಗಿತ್ತು. ಕಂಬಳ ಕರೆಯಲ್ಲಿದ್ದ ಶಾಸಕ ಭರತ್ ಶೆಟ್ಟಿ ವಿಜಯ ಕ್ಷಣವನ್ನು ಸಂಗಡಿಗರನ್ನು ತಬ್ಬಿ ಸಂಭ್ರಮಿಸಿದರು. ಕೋಣಗಳನ್ನು ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಓಡಿಸಿದರು.

vtv vitla
- Advertisement -

Related news

error: Content is protected !!