- Advertisement -
- Advertisement -
ಮಂಗಳೂರು: ಸಿಡಿಲು ಬಡಿದು ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ವಾಮಂಜೂರು ಅಮೃತ ನಗರದಲ್ಲಿ ಗೋಪಾಲ ಪೂಜಾರಿ ಎಂಬುವವರ ಮನೆಗೆ ಸಿಡಿಲು ಬಡಿದಿದ್ದು, ಸಿಡಿಲಿನ ಆರ್ಭಟಕ್ಕೆ ಮನೆಯ ವಿದ್ಯುತ್ ಉಪಕರಣಗಳು ಹಾನಿಗೊಳಗಾದರೆ, ಶಾರ್ಟ್ ಸರ್ಕೀಟ್ ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗಳು ಸ್ಪೋಟಗೊಂಡಿದೆ.
ಈ ವೇಳೆ ಮನೆಯಲ್ಲಿದ್ದ ಮಹಿಳೆ ಶ್ವೇತಾ ಹಾಗೂ 5 ವರ್ಷದ ಮಗುವಿನ ಕಿವಿಗೆ ಹಾನಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ನಾಲ್ವರು ಸದಸ್ಯರಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
- Advertisement -