Wednesday, May 8, 2024
spot_imgspot_img
spot_imgspot_img

ಕೊರೊನಾ ಎರಡನೇ ಅಲೆಯ ಬಗ್ಗೆ ಮುನ್ನೆಚ್ಚರಿಕೆ- ಲಯನ್ಸ್ ಜಿಲ್ಲೆ 317ಡಿ ವತಿಯಿಂದ 20 ಲಕ್ಷ ರೂ. ಮೌಲ್ಯದ ಕೋವಿಡ್ ಸಲಕರಣೆಗಳ ಹಸ್ತಾಂತರ

- Advertisement -G L Acharya panikkar
- Advertisement -

ಮಂಗಳೂರು: ಕೊರೋನಾ ಎರಡನೇ ಅಲೆಯ ಸಾಧ್ಯತೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದು. ಸಾರ್ವಜನಿಕರು ಈಗಿನಿಂದಲೇ ಈ ಬಗ್ಗೆ ಮುನ್ನೇಚರಿಕೆ ವಹಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮಾತ್ ಕರೆ ನೀಡಿದರು.

ಕೊರೋನಾ ಸೈನಿಕ್ ಟಾಸ್ಕ್ ಫೋರ್‍ಸ್‌ನ ಚೆಯರ್ ಪರ್ಸನ್ ಹಾಗೂ ಕಮಂಡಿಗ್ (HQ & Ops ) ಸಿವಿಲ್ ಡಿಫೆನ್ಸ್‌ನ ಸಹಾಯಕ ಮುಖ್ಯ ಅಧಿಕಾರಿ ಲಯನ್.ಡಾ. ಪಿ.ಆರ್.ಎಸ್.ಚೇತನ್ ಹಾಗೂ ಮಲ್ಟಿಪಲ್ ಕೌನ್ಸಿಲ್ ಚೆಯರ್‌ಮೆನ್ ಲಯನ್ ಡಾ.ನಾಗರಾಜ್ ವಿ.ಬೈರಿ ಇವರ ಸತತ ಪರಿಶ್ರಮದಿಂದ ಸಿಮನ್ಸ್ ಇಂಡಿಯಾ ಹಾಗೂ ನಸ್‌ಕೊಮ್ (NASSCOM) ಫೌಂಡೇಷನ್ ಇವರು ಲಯನ್ಸ್ ಜಿಲ್ಲೆ 317.ಡಿ ಇವರಿಗೆ ಒದಗಿಸಿದಂತಹ ಸುಮಾರು 20 ಲಕ್ಷ ರೂ. ಮೌಲ್ಯದ ಕೋವಿಡ್ ಸಲಕರಣೆಗಳನ್ನು ನಗರದ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ಹಾಗೂ ಇನ್ನಿತರ ಸರ್ಕಾರಿ ಆಸ್ಪತ್ರೆಗಳಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದಿದ್ದು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಾಸಕರು ಮಾತನಾಡಿದರು.ಪ್ರಾಮಾಣಿಕತೆ ಮತ್ತು ಸೇವೆಗೆ ಇನ್ನೊಂದು ಹೆಸರು ಅದು ಲಯನ್ಸ್ ಸಂಸ್ಥೆ ಎಂದು ಉಲ್ಲೇಖ ಮಾಡಬಹುದು. ಸೇವಾ ಮನೋಭಾವನೆಯಿಂದ ಸೇವೆ ಮಾಡುವ ಮೂಲಕ ಹತ್ತು ಹಲವು ರೀತಿಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಲಯನ್ಸ್ ಸಂಸ್ಥೆ ನಮ್ಮ ಜಿಲ್ಲೆಯೂ ಸೇರಿ ಇಡೀ ದೇಶಾದಾದ್ಯಂತ ನಿರಂತರವಾಗಿ ಅತಿ ದೊಡ್ಡ ಕೊಡುಗೆಯನ್ನು ನೀಡುತ್ತಾ ಬಂದಿದೆ.

ಕೋವಿಡ್ ಮಾಹಮಾರಿ ಪರಿಣಾಮಕಾರಿಯಾಗಿ ವ್ಯಾಪಿಸುತ್ತಿದ್ದ ಸಂದರ್ಭದಲ್ಲಿ ಹಲವಾರು ಕಡೆಗಳಲ್ಲಿ ಸಾವಿರಾರು ಮಂದಿ ಬಡವರಿಗೆ ಅಹಾರ ಕಿಟ್ ಸೇರಿದಂತೆ ಇನ್ನಿತರ ಕೋವಿಡ್ ಸಾಮಾಗ್ರಿಗಳನ್ನು ಲಯನ್ಸ್ ಸಂಸ್ಥೆ ನೀಡುತ್ತಾ ಬಂದಿರುವುದನ್ನು ನಾನು ಹಲವು ಕಾರ್ಯಕ್ರಮಗಳಲ್ಲಿ ನೋಡಿದ್ದೇನೆ. ಇಂದು ಸರಿ ಸುಮಾರು 20 ಲಕ್ಷ ರೂ. ಮೌಲ್ಯದ ಕೋವಿಡ್ ಸಲಕರಣೆಗಳನ್ನು ನಗರದ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ಹಾಗೂ ಇನ್ನಿತರ ಆಸ್ಪತ್ರೆಗೆ ಹಸ್ತಾಂತರ ಮಾಡಿರುವುದು ನಮಗೆಲ್ಲಾ ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಜಿಲ್ಲೆ 317.ಡಿ ಇದರ ಜಿಲ್ಲಾ ರಾಜ್ಯಪಾಲಕ ಲಯನ್ ಡಾ. ಗೀತಾ ಪ್ರಕಾಶ್ ಎ. ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ, ಈ ಕೊರೋನಾ ಮಾಹಾಮಾರಿ ವೈದ್ಯರ ಲೋಕವನ್ನೇ ಅಲ್ಲೊಲ್ಲ ಕಲ್ಲೊಲ್ಲ ಮಾಡಿದೆ. ನಿರಂತರವಾಗಿ ಸೋಂಕಿತರ ಸೇವೆಯಲ್ಲಿ ತೊಡಗಿದಂತಹ ಅದೇಷ್ಟು ಮಂದಿ ವೈದ್ಯರು, ಆರೋಗ್ಯ ಕಾರ್ಯಕರ್ತರು ತಮ್ಮ ಪ್ರಾಣವನ್ನೇ ಬಲಿಕೊಟ್ಟಿದ್ದಾರೆ. ಇಂತಹ ಕಠಿಣ ಸಂದರ್ಭದಲ್ಲಿ ಲಯನ್ಸ್ ಜಿಲ್ಲೆ ಪ್ರಾಣದ ಹಂಗು ತೊರೆದು ಸೋಂಕು ಪೀಡಿತರ ನೋವಿಗೆ ಸ್ಪಂದಿಸಿ ಅವರಿಗೆ ಅಗತ್ಯವಿರುವಂತಹ ಆಹಾರ ಕಿಟ್ ಹಾಗೂ ಕೋವಿಡ್ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ.

ನಾನೂ ಒಬ್ಬ ವೈದ್ಯನಾಗಿರುವುದರಿಂದ ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ಜಿಲ್ಲೆಗೆ ಇನ್ನಷ್ಟು ಹೆಚ್ಚಿನ ಕೋವಿಡ್ ರಕ್ಷಣಾ ಸಲಕರಣೆಗಳನ್ನು ನೀಡಬೇಕು. ನಮ್ಮ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಗುಣಮಟ್ಟದ ಕೋವಿಡ್ ಸಲಕರಣೆಗಳು ಲಭ್ಯವಿರಬೇಕು ಎಂಬ ಸಂಕಲ್ಪ ಮಾಡಿದ್ದೆ. ಉದಾರ ದಾನಿಗಳ ನೆರವಿನಿಂದ ನಮ್ಮ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಅತ್ಯುತ್ತಮ ಕೋವಿಡ್ ಸಲಕರಣೆಗಳನ್ನು ವಿತರಿಸಬೇಕು ಎಂಬ ನನ್ನ ಕನಸು ಲಯನ್.ಡಾ. ಪಿ.ಆರ್.ಎಸ್.ಚೇತನ್ ಹಾಗೂ ಲಯನ್ ಡಾ.ನಾಗರಾಜ್ ವಿ.ಬೈರಿ ಇವರ ಸತತ ಪರಿಶ್ರಮದಿಂದ ನನಸಾಗಿದೆ ಎಂದು ಡಾ. ಗೀತಾ ಪ್ರಕಾಶ್ ಹರ್ಷ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ನಗರದ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ಹಾಗೂ ಇನ್ನಿತರ ಸರ್ಕಾರಿ ಆಸ್ಪತ್ರೆಗಳಿಗೆ ನಗರದ ಜಿಲ್ಲಾ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ದುರ್ಗಾ ಪ್ರಸಾದ್ ಅವರ ಮೂಲಕ ಸುಮಾರು 20 ಲಕ್ಷ ರೂ. ಮೌಲ್ಯದ ಕೋವಿಡ್ ಸಲಕರಣೆಗಳನ್ನು ಹಸ್ತಾಂತರ ಮಾಡಲಾಯಿತು.

ಕೋವೀಡ್ ಆರಂಭವಾದ ದಿನದಿಂದ ಸೋಂಕಿತರ ಹಾಗೂ ಅವರ ಕುಟುಂಬಗಳಿಗೆ ಒಂದುವರೆ ಕೋಟಿಗೂ ಹೆಚ್ಚು ಆಹಾರ ಒದಗಿಸಿದಂತಹ, ನೆರೆ ಹಾವಾಳಿ ಸಂದರ್ಭ ದೇಶದೆಲ್ಲೆಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ ಸಾಹಸಿ, ತಮ್ಮ ಸತತ ಸಾಧನೆಗಳಿಗಾಗಿ ರಾಷ್ಟ್ರಪ್ರಶಸ್ತಿ, ರಾಜ್ಯ ಪ್ರಶಸ್ತಿ, ಮುಖ್ಯಮಂತ್ರಿ ಪದಕ ಸಹಿತಾ ನೂರಾರು ಪ್ರಶಸ್ತಿಗಳನ್ನು ಪಡೆದಿರುವಂತಹ ಬಹುದೊಡ್ಡ ಸಾಧಕ, ರಾಷ್ಟ್ರದ ಅತ್ಯೂನ್ನತ ಪ್ರಶಸ್ತಿಯಾದ ಶೌರ್ಯ ಪ್ರಶಸ್ತಿ ಪಡೆದಂತಹ, ಮಾನವೀಯ ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡುವ ಕೊರೋನಾ ಸೈನಿಕ್ ಟಾಸ್ಕ್ ಫೋರ್‍ಸ್‌ನ ಚೆಯರ್ ಪರ್ಸನ್ ಹಾಗೂ ಕಮಂಡಿಗ್ (HQ & Ops ) ಸಿವಿಲ್ ಡಿಫೆನ್ಸ್‌ನ ಸಹಾಯಕ ಮುಖ್ಯ ಅಧಿಕಾರಿ ಲಯನ್.ಡಾ. ಪಿ.ಆರ್.ಎಸ್.ಚೇತನ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಲಯನ್.ಡಾ. ಪಿ.ಆರ್.ಎಸ್.ಚೇತನ್ ಅವರು ಲಯನ್ಸ್ ಕ್ಲಬ್ ಜಿಲ್ಲೆ 317ಡಿ ಇದರ ಜಿಲ್ಲಾ ರಾಜ್ಯಪಾಲಕರಾದ ಲಯನ್ ಡಾ. ಗೀತಾ ಪ್ರಕಾಶ್ ಎ. ಅವರ ಉತ್ತಮ ನಾಯಕತ್ವದಲ್ಲಿ ಅವರ ಲಯನ್ಸ್ ತಂಡ ಕೋವಿಡ್ ವಿಚಾರದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಇದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಕೋವಿಡ್ ಸೋಂಕು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಈಗ ಯಾಕೆ ಕೋವಿಡ್ ಸಲಕರಣೆ ವಿತರಣೆ ಎಂಬ ಪ್ರಶ್ನೆ ನಿಮ್ಮಲಿ ಮೂಡಬಹುದು. ಆದರೆ ಕೋವಿಡ್‌ನ ಎರಡನೇ ಅಲೆಯ ಸಾಧ್ಯತೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದು, ಎರಡನೇ ಅಲೆ ಮೊದಲಿಗಿಂತ ಜಾಸ್ತಿ ಪರಿಣಾಮಕಾರಿಯಾಗುವ ಲಕ್ಷಣವನ್ನು ಹೊಂದಿದೆ. ಈ ಬಗ್ಗೆ ನಾವು ತುಂಬಾ ಮುನ್ನೇಚರಿಕೆ ವಹಿಸಬೇಕಾದ ಅಗತ್ಯವಿದೆ. ಅದಕ್ಕಾಗಿ ಈಗಿನಿಂದಲೇ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಚಟುವಟಿಕೆ ಎಂದು ಡಾ. ಪಿ.ಆರ್.ಎಸ್.ಚೇತನ್ ಅವರು ಹೇಳಿದರು.ಲಯನ್ ಜಿಲ್ಲೆ 317ಡಿ ಇದರ ಸಾರ್ವಜನಿಕ ಸಂಪರ್ಕಧಿಕಾರಿ (PRO) ಲ. ವಿಟ್ಲ ಮಂಗೇಶ್ ಭಟ್ ಅವರು ಲಯನ್.ಡಾ. ಪಿ.ಆರ್.ಎಸ್.ಚೇತನ್ ಅವರ ಬಗ್ಗೆ ಅಭಿನಂದನಾ ನುಡಿಗಳನ್ನು ಆಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯ ಅತಿಥಿಗಳಾದ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ, ಸ್ಥಳೀಯ ಮನಪಾ ಸದಸ್ಯೆ ಪೂರ್ಣಿಮಾ, ನಗರದ ಜಿಲ್ಲಾ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ದುರ್ಗಾ ಪ್ರಸಾದ್, ಜಿಲ್ಲಾ ಪ್ರಥಮ ವಿಡಿಜಿ ಲಯನ್ ವಸಂತ್ ಕುಮಾರ್ ಶೆಟ್ಟಿ, ಜಿಲ್ಲಾ ಲಯನ್ ಸಿ.ಪಿ. ದಿನೇಶ್, ಜಿಲ್ಲಾ ಕೋಶಾಧಿಕಾರಿ ಲಯನ್ ಮೊಹಮ್ಮದ್ ಇಕ್ಬಾಲ್ ಮುಂತಾದವರು ಮಾತನಾಡಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಲಯನ್ಸ್ ಜಿಲ್ಲೆ 317ಡಿ ಇದರ ಜಿಲ್ಲಾ ಸಂಪುಟ ಸೇವಾ ಸಂಯೋಜಕರಾದ ಜಿ.ಆರ್.ಶೆಟ್ಟಿ, ಹೆಚ್ಚುವರಿ ರಾಜ್ಯಪಾಲರ ಸಹ ಸಂಯೋಜಕ ವಿ.ಗಂಗಾಧರ್, ನಿಕಟ ಪೂರ್ವ ರಾಜ್ಯಪಾಲರಾದ ಜೆ.ಕೆ.ರಾವ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಸಂಚಾಲಕ ಲ. ಪ್ರವೀಣ್ ಶೆಟ್ಟಿ ಸ್ವಾಗತಿಸಿದರು ಹಾಗೂ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಜಿಎಸ್‌ಟಿ ವಿಭಾಗದ ಚೆಯರ್‌ಮೆನ್ ಬ್ರಹ್ಮಂಮ್ ವಂದಿಸಿದರು.

- Advertisement -

Related news

error: Content is protected !!