- Advertisement -
- Advertisement -
ಮಂಗಳೂರು: ಮಾಸ್ಕ್ ಧರಿಸದೇ, ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿನ ವ್ಯಕ್ತಿಯ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಸ್ಕ್ ಧರಿಸದೇ ಕರ್ತವ್ಯಕ್ಕೆ ಅಡ್ಡಿಪಡಿಸಿದವನನ್ನು ಶಾಕಿರ್ ಎಂದು ಗುರುತಿಸಲಾಗಿದೆ. ಪಿಡಿಒ ಪರಿಶೀಲನೆಗೆ ಬಂದಾಗ ಮಾಸ್ಕ್ ಧರಿಸದೇ ಕೆಲವರು ಕುಳಿತಿದ್ದರು. ಈ ಬಗ್ಗೆ ಪಿಡಿಒ ಎಲ್ಲರಿಗೂ ಮಾಸ್ಕ್ ಧರಿಸುವಂತೆ ಎಚ್ಚರಿಸಿದ್ದು, ಆದರೆ ಶಾಕಿರ್ ‘ನಾನು ಮಾಸ್ಕ್ ಧರಿಸುವುದಿಲ್ಲ. ಇದು ನನ್ನ ಮನೆಯ ಅಂಗಳ, ಇಲ್ಲಿ ನಾನು ಹೇಗೆ ಬೇಕಾದರೂ ಇರುತ್ತೇನೆ. ನೀವು ಯಾರು ಕೇಳಲಿಕ್ಕೆ ಎಂದು ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಈ ಹಿನ್ನೆಲೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಕಾನೂನನ್ನು ಉಲ್ಲಂಘಿಸಲಾಗಿದೆ ಎಂದು ಪ್ರಕರಣ ದಾಖಲಾಗಿದೆ.
- Advertisement -