ಪುತ್ತೂರು ರೈಲ್ವೇ ನಿಲ್ದಾಣದ ಅಗತ್ಯ ಕೆಲಸಗಳ ಬಗ್ಗೆ ಸಚಿವರಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು..!




ಮಂಗಳೂರು: ರೈಲ್ವೆ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಮಂಗಳವಾರ ರಾತ್ರಿ ಆಗಮಿಸಿದ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ .ಸೋಮಣ್ಣ ಅವರನ್ನು ಸಂಸದ ಬ್ರಿಜೇಶ್ ಚೌಟ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.
ಸಚಿವ ಸೋಮಣ್ಣ ಅವರು ಜುಲೈ 17 ರಂದು ಬೆಳಗ್ಗೆ ಒಂಭತ್ತು ಗಂಟೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣ, ಬಳಿಕ ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಭೇಟಿ ನೀಡಿದರು. ಬಳಿಕ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಸಂಬಂಧಿಸಿ ಸಭೆಯ ನೇತೃತ್ವ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ರವರು ಪುತ್ತೂರು ರೈಲ್ವೇ ನಿಲ್ದಾಣ ಹಾಗೂ ರೈಲ್ವೇ ಮಾರ್ಗದಲ್ಲಾಗಬೇಕಾದ ಅಗತ್ಯ ಕೆಲಸಗಳ ಬಗ್ಗೆ ರೈಲ್ವೆ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣಗೆ ಮನವಿ ನೀಡಿದರು.

ಕಬಕ ಪುತ್ತೂರು ಆದರ್ಶ ರೈಲ್ವೆ ನಿಲ್ದಾಣದ ಫ್ಲಾಟ್ ಫಾರ್ಮ್ ಗೆ ಮಳೆ ಹಾಗೂ ಬಿಸಿಲಿಗೆ ರಕ್ಷಣೆ ನೀಡಲು ಶೆಲ್ಪರ್ ವ್ಯವಸ್ಥೆ. ಕಬಕ ಪುತ್ತೂರು ಆದರ್ಶ ರೈಲ್ವೆ ಸ್ಪೆಷನ್ ಗೆ ಸಿಸಿಟಿವಿ ವ್ಯವಸ್ಥೆ, ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಹೋದಾಗ ಜನರೇಟರ್ ವ್ಯವಸ್ಥೆ, ಕಬಕ ಪುತ್ತೂರು ಆದರ್ಶ ರೈಲ್ವೆ ಸ್ಟೇಷನ್ನಲ್ಲಿ ಪ್ರಯಾಣಿಕರ ರೈಲು ಕೇವಲ 2 ನಿಮಿಷ ತಂಗುವ ಬದಲು ಕನಿಷ್ಠ 5 ನಿಮಿಷ ತಂಗುವ ವ್ಯವಸ್ಥೆ ಆಗಬೇಕು. ಮಂಗಳೂರು-ಕಬಕ-ಪುತ್ತೂರು ಬೆಳಿಗ್ಗೆ 6.40ಕ್ಕೆ ಬರುವ ಪ್ರಯಾಣಿಕ ರೈಲನ್ನು ಸುಬ್ರಹ್ಮಣ್ಯ ತನಕ ವಿಸ್ತರಣೆ ಮಾಡಬೇಕು.
ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಾಮೆತ್ತಡ್ಕ ಹಾಗೂ ಪುತ್ತೂರು ಕ್ಲಬ್ ಇಲ್ಲಿರುವ ರೈಲು ಕ್ರಾಸಿಂಗ್ ಇದಕ್ಕೆ ಓವರ್ ಬ್ರಿಡ್ಜ್ ಅಥವಾ ಅಂಡರ್ ಬ್ರಿಡ್ಜ್ ಮಾಡಬೇಕು ಎಂಬ ಬೇಡಿಕೆಗಳ ಮನವಿಯನ್ನು ಮಾಜಿ ಶಾಸಕರು ಕೇಂದ್ರ ಸಚಿವರ ಮುಂದಿಟ್ಟಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಕೇಂದ್ರ ಸಚಿವರು ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.