- Advertisement -
- Advertisement -
ಮಂಗಳೂರು: ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಥುನ್ ರೈ ಸಮಾಜದಲ್ಲಿ ಕೋಮು ಪ್ರಚೋದನೆಯನ್ನುಂಟು ಮಾಡುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸ್ವಯಂಪ್ರೇರಿತರಾಗಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಒತ್ತಾಯಿಸಿದ್ದಾರೆ.
ಅದೇ ರೀತಿ ಬೆಡ್ ಬ್ಲಾಕ್ ದಂಧೆಯಲ್ಲಿ ತೊಡಗಿರುವ ಬಿಜೆಪಿ ಶಾಸಕ ಸತೀಶ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿ ಸಬೇಕು. ಕೋವಿಡ್ ನಿಯಂತ್ರಣಕ್ಕಾಗಿ ಸರಕಾರ ಅಥವಾ ಜಿಲ್ಲಾಡಳಿತ ಲಾಕ್ ಡೌನ್ ಮಾಡಿದರೆ ಜನಸಾಮಾನ್ಯರಿಗೆ ಅವಶ್ಯಕ ಸಾಮಗ್ರಿಗಳ ಕಿಟ್ಗಳನ್ನು ಅವರ ಮನೆಗಳಿಗೇ ತಲುಪಿಸಬೇಕು ಎಂದು ಮಿಥುನ್ ರೈ ಇದೇ ವೇಳೆ ಆಗ್ರಹಿಸಿದ್ದಾರೆ.
- Advertisement -