Friday, June 27, 2025
spot_imgspot_img
spot_imgspot_img

ಮಂಗಳೂರು: ರೆಸ್ಟೋರೆಂಟ್‌ನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

- Advertisement -
- Advertisement -
vtv vitla

ಮಂಗಳೂರು: ನಗರದ ರೆಸ್ಟೋರೆಂಟ್‌ವೊಂದರಲ್ಲಿ ಪತ್ರಕರ್ತರೊಬ್ಬರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವೆಬ್‌ಸೈಟ್‌ವೊಂದರ ಯುವ ವರದಿಗಾರ ಅಭಿಜಿತ್ ಜುಲೈ 26ರಂದು ತನ್ನ ಕಾಲೇಜಿನ ಸಹಪಾಠಿ ಯುವತಿಯ ಜೊತೆ ಊಟ ಮುಗಿಸಿ ಹೊಟೇಲ್ ನಿಂದ ಹೊರಬರುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ‘ನೀನು ಬ್ಯಾರಿಯೊಂದಿಗೆ ಏನು ಮಾತನಾಡುತ್ತಿ. ನೀನು ಬ್ಯಾರಿಯಾ? ಇಲ್ಲಿಂದ ಹೊರಡು’ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭ ಅಭಿಜಿತ್ ತಾನು ವೆಬ್‌ಸೈಟ್‌ವೊಂದರ ವರದಿಗಾರನೆಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಅಪರಿಚಿತ ವ್ಯಕ್ತಿ ಮತ್ತೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಪರಿಚಿತ ವ್ಯಕ್ತಿಯ ಜೊತೆ ಇನ್ನೂ ಒಬ್ಬ ಇದ್ದ ಎಂದು ಹೇಳಲಾಗಿತ್ತು.

ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!