Thursday, April 25, 2024
spot_imgspot_img
spot_imgspot_img

ಮಂಗಳೂರು:ಎನ್​ಸಿಬಿ ವಶದಲ್ಲಿದ್ದ ಡ್ರಗ್ಸ್ ಪ್ರಕರಣ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು.!

- Advertisement -G L Acharya panikkar
- Advertisement -

ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಎನ್​ಸಿಬಿ ವಶದಲ್ಲಿದ್ದ ಆರೋಪಿಗಳಾದ ಕಿಶೋರ್ ಅಮನ್ ಶೆಟ್ಟಿ ಹಾಗೂ ಅಕೀಲ್ ನೌಶೀಲ್​ರನ್ನು ಕೋರ್ಟ್​ಗೆ ಹಾಜರು ಪಡಿಸಲು ಕರೆದೊಯ್ಯಲಾಗಿದೆ.

 ಇವರ ಜೊತೆಯಲ್ಲಿ ಹೆಸರು ಕೇಳಿಬರುತ್ತಿರುವ ಕಿರುತೆರೆ ನಿರೂಪಕಿ ಅನುಶ್ರೀಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನಿನ್ನೆ ನೋಟಿಸ್ ನೀಡಿದ್ದರು. ಆದರೆ ಇಂದು ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಆರೋಪಿಗಳನ್ನು ಕೋರ್ಟ್​ಗೆ ಹಾಜರು ಪಡಿಸಲು ಕರೆದೊಯ್ಯಲಾಯಿತು‌. ನಗರದ ಪಾಂಡೇಶ್ವರದಲ್ಲಿರುವ ಇಕೊನಾಮಿಕ್ ಆ್ಯಂಡ್ ಎನ್​ಸಿಬಿ ಪೊಲೀಸರು ಆರೋಪಿಗಳನ್ನು ಕರೆದೊಯ್ದಿದ್ದಾರೆ.

ಮೊದಲು ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಮಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗುತ್ತದೆ. ತನಿಖೆಗಾಗಿ ಏಳು ದಿನಗಳ ಕಾಲ ಆರೋಪಿಗಳಾದ ಕಿಶೋರ್ ಅಮನ್ ಶೆಟ್ಟಿ ಹಾಗೂ ಅಕೀಲ್ ನೌಶೀಲ್​ರನ್ನು ಎನ್​ಸಿಬಿ ಪೊಲೀಸರ ವಶಕ್ಕೆ ನೀಡಲಾಗಿತ್ತು. ಇದೀಗ ವಿಚಾರಣೆ ಮುಗಿದ ಹಿನ್ನೆಲೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ.

- Advertisement -

Related news

error: Content is protected !!