Friday, April 26, 2024
spot_imgspot_img
spot_imgspot_img

ಮಂಗಳೂರು: ಪಡ್ರೆ ಮುಂಚೂರು ಪ್ರದೇಶಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ!

- Advertisement -G L Acharya panikkar
- Advertisement -

ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ ವಾರ್ಡ್ ನಂಬರ್ 2ರ ಪಡ್ರೆ ಪರಿಸರಕ್ಕೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬುಧವಾರ ಭೇಟಿ ನೀಡಿದರು.

ಈ ಪರಿಸರದಲ್ಲಿ ವರ್ಷಂಪ್ರತಿ ಮಳೆಗಾಲದಲ್ಲಿ ಕೃತಕ ನೆರೆಯ ಸಮಸ್ಯೆಯನ್ನು ಸ್ಥಳೀಯ ನಾಗರಿಕರು ಅನುಭವಿಸುತ್ತಿದ್ದರು. ಅದಕ್ಕಾಗಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು SEZ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು ಈ ತಿಂಗಳ ಕೊನೆಯ ಒಳಗೆ ಅವೈಜ್ಞಾನಿಕವಾಗಿ ಹಾಕಿರುವ ಪೈಪನ್ನು ತೆರವುಗೊಳಿಸಿ ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಶಾಶ್ವತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹೇಶ್ ಮೂರ್ತಿ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ ,ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಭರತ್ ರಾಜ್ ಕೃಷ್ಣಾಪುರ,ರಾಘವೇಂದ್ರ ಶೆಣೈ , ಪ್ರವೀಣ್ , ಶಕ್ತಿ ಕೇಂದ್ರ ಪ್ರಮುಖ್ ಜಯಂತ್ , ಬೂತ್ ಅಧ್ಯಕ್ಷರುಗಳಾದ, ರವಿ ಶೆಟ್ಟಿ , ಹಾಗೂ ಕಾರ್ಯದರ್ಶಿ ಯಾದವ್ ಪೂಜಾರಿ , ಭೋಜ ಶೆಟ್ಟಿ , ಲತೀಶ್, ರಾಜೇಶ್ ಶರತ್ ಕರಿಕಟ್ಟ , ವಿನೀತ್ ಶೆಟ್ಟಿ ,ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!