Friday, April 26, 2024
spot_imgspot_img
spot_imgspot_img

ಹೆತ್ತವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಮಗ!

- Advertisement -G L Acharya panikkar
- Advertisement -

ನ್ಯೂಜಿಲಂಡ್: ಮಂಗಳೂರು ಮೂಲದ ದಂಪತಿಯನ್ನು ಅವರ ಮಗನೇ ಚೂರಿಯಿಂದ ಇರಿದು ಭೀಕರವಾಗಿ ಕೊಲೆಗೈದ ಘಟನೆ ನ್ಯೂಜಿಲಂಡ್ ದೇಶದ ಆಕ್ಲೆಂಡ್ ನಗರದಲ್ಲಿ ನಡೆದಿದೆ.

ಮೂಲತಃ ಮಂಗಳೂರಿನ ಬಲ್ಮಠ ನಿವಾಸಿಗಳಾಗಿದ್ದ ಕ್ರಿಶ್ಚಿಯನ್ ದಂಪತಿ ಎಲ್ಸಿ ಬಂಗೇರ ಮತ್ತು ಆಕೆಯ ಪತಿ ಹರ್ಮನ್ ಬಂಗೇರ ಕೊಲೆಯಾದವರು. 23 ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಪುತ್ರ ಶೀಲ್ ಎಂಬಾತ ತನ್ನ ಮನೆಯಲ್ಲೇ ಕೊಲೆ ಮಾಡಿದ್ದಾನೆ. ಐದು ದಿನಗಳ ಹಿಂದೆ ಘಟನೆ ನಡೆದಿದ್ದು ಹೆತ್ತವರಿಗೆ ಚೂರಿಯಿಂದ ಇರಿದ ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಸ್ಥಳೀಯರು ಗಮನಿಸಿ, ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಎಲ್ಸಿ ಮತ್ತು ಹರ್ಮನ್ ಮಂಗಳೂರಿನವರು. ಎಲ್ಸಿಯ ತಂದೆ ಎಡ್ವರ್ಡ್ ಅಮ್ಮನ್ನ ಬಲ್ಮಠದ ಶಾಂತಿ ಕೆಥಡ್ರಲ್ ನ ಸಂಡೇ ಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು.

ಮರ್ಕೆರಾ ಹಿಲ್ ಚರ್ಚ್ ನಲ್ಲಿ ಹಿರಿಯರಾಗಿ ಗೌರವ ಹೊಂದಿದ್ದರು. ‌ಹರ್ಮನ್ ಮುಂಬೈನ ಶಾಲೆ ಒಂದರಲ್ಲಿ ಆಡಳಿತಾಧಿಕಾರಿ ಆಗಿದ್ದರು. ಮುಂಬೈನಲ್ಲಿ ಗೋದ್ರೆಜ್ ಕಂಪನಿಯಲ್ಲಿ ಉದ್ಯೋಗ ಹೊದಿದ್ದ ಎಲ್ಸೀ ಬಳಿಕ ಮದುವೆಯಾಗಿದ್ದರು.

ಆನಂತರ ದಂಪತಿ ಗೋವಾದಲ್ಲಿ ನೆಲೆಸಿದ್ದರು. ಮಗನ ಉನ್ನತ ಮತ್ತು ಉತ್ತಮ ವಿದ್ಯಾಭ್ಯಾಸಕ್ಕಾಗಿ ದಂಪತಿ 2007ರಲ್ಲಿ ನ್ಯೂಜಿಲ್ಯಾಂಡ್ ತೆರಳಿದ್ದರು. 2014ರಲ್ಲಿ ಮಗ ಪದವಿ ಪಡೆದಾಗ ತೆಗೆಸ್ಕೊಂಡಿದ್ದ ಚಿತ್ರವನ್ನು ತಂದೆ ಹರ್ಮನ್ ಇತ್ತೀಚೆಗಷ್ಟೇ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಆದರೆ, ಮಗ ಇತ್ತೀಚಿನ ದಿನಗಳಲ್ಲಿ ಹೆತ್ತವರಿಂದ ದೂರವಿರಲು ಬಯಸಿದ್ದ. ಜೊತೆಗೆ ತನ್ನಿಚ್ಚೆಗೆ ಸರಿ ಕಂಡಂತೆ ವರ್ತಿಸುತ್ತಿದ್ದ. ಇದೇ ಕಾರಣಕ್ಕೆ ಹೆತ್ತವರ ಜೊತೆ ಜಗಳವಾಗುತ್ತಿತ್ತು ಎನ್ನಲಾಗಿದೆ.

ಇದೇ ವಿಚಾರದಲ್ಲಿ ಕಳೆದ ಶುಕ್ರವಾರ ಜಗಳ ನಡೆದಿದ್ದು, ಕ್ರೋದಗೊಂಡ ಶೀಲ್ ಹೆತ್ತವರ ಮೇಲೆ ಚೂರಿಯಿಂದ ಇರಿದಿದ್ದು, ಹೆತ್ತವರು ಸತ್ತರೆಂದು ಗೊತ್ತಾದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈಗ ಆಕ್ಲೆಂಡ್‌ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!