Friday, April 26, 2024
spot_imgspot_img
spot_imgspot_img

ಮಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿ ಬೀಚ್ ರೆಸಾರ್ಟ್ ನಲ್ಲಿ ಪಾರ್ಟಿ; ಪೊಲೀಸ್ ಅಧಿಕಾರಿಗಳ ದಾಳಿ!

- Advertisement -G L Acharya panikkar
- Advertisement -

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ರೆಸಾರ್ಟ್ ಪಾರ್ಟಿ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

ಕೋವಿಡ್ ಕಟ್ಟುನಿಟ್ಟಿನ ನಿಯಮವನ್ನು ಲೆಕ್ಕಿಸದೆ ಕುಳಾಯಿ ಬೀಚ್ ನ ರೆಸಾರ್ಟ್ ನಲ್ಲಿ ಭರ್ಜರಿ ಪಾರ್ಟಿ ನಡೆಸುತ್ತಿದ್ದ ಮಾಹಿತಿ ಪಡೆದ ಎಸಿ ಮದನ್ ಮೋಹನ್,ಎಸಿಪಿ ಅವರ ಜಂಟಿ ತಂಡ ಸ್ಥಳಕ್ಕೆ ದಾಳಿ ನಡೆಸಿ ಸಂಬಂಧ ಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೋರ್ ರೆಸಾರ್ಟ್ ನಲ್ಲಿ ಮಂಗಳವಾರ ಸಂಜೆ ಮದುವೆ ಪಾರ್ಟಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗಿತ್ತು. ಇದು ಮಾತ್ರವಲ್ಲದೆ ಡಿಜೆ, ಮದ್ಯಪಾನ ವ್ಯವಸ್ಥೆ ಮಾಡಲಾಗಿತ್ತು‌. ಈ ಬಗ್ಗೆ ಮಾಹಿತಿ ಪಡೆದ ಎಸಿ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ಧಾಳಿ ನಡೆಸಿ, ಕಾರ್ಯಕ್ರಮ ಆಯೋಜಕರ ವಿರುದ್ಧ ಹಾಗೂ ರೆಸಾರ್ಟ್ ಮಾಲೀಕರ ವಿರುದ್ಧ ಕೇಸು ದಾಖಲಿಸಲು ಸುರತ್ಕಲ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!