Wednesday, May 15, 2024
spot_imgspot_img
spot_imgspot_img

ಮಂಗಳೂರು: ಖಾಸಗಿ ಬಸ್ ಢಿಕ್ಕಿ; ಪಾದಚಾರಿ ಸ್ಥಳದಲ್ಲೇ ಮೃತ್ಯು..!

- Advertisement -G L Acharya panikkar
- Advertisement -

ಮಂಗಳೂರು: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಬಳಿ ಸಂಭವಿಸಿದೆ.

ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪಾದಚಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ‌. ಇದರಿಂದ ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಖಾಸಗಿ ಬಸ್ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ‌.

- Advertisement -

Related news

error: Content is protected !!