Thursday, May 2, 2024
spot_imgspot_img
spot_imgspot_img

ಮಂಗಳೂರು: ಬಸ್‌ ಡ್ರೈವರ್‌ನ ಸಮಯಪ್ರಜ್ಞೆ; ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

- Advertisement -G L Acharya panikkar
- Advertisement -

ಮಂಗಳೂರು: ಬಸ್‌ ಡ್ರೈವರ್‌ನ ಸಮಯಪ್ರಜ್ಞೆಯಿಂದ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ.ಈ ವೇಳೆ ಎದುರಿನಿಂದ ಬಸ್ ಬಂದಿದೆ.ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.ಚಾಲಕನ ಸಮಯಪ್ರಜ್ಞೆಗೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Related news

error: Content is protected !!